ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ಶ್ರೀ ನರಸಿಂಹ ಸ್ವಾಮಿ ಜಯಂತಿ ರಥೋತ್ಸವ ನಡೆಯಿತು.
ಈ ಕಾರ್ಯಕ್ರಮದಲ್ಲಿ ದೇವಾಲಯದ ಕಾರ್ಯದರ್ಶಿ ಎಂ ನಾರಾಯಣಸ್ವಾಮಿ ನಗರಸಭೆಯ ಪೌರಾಯುಕ್ತ ಕಾರ್ತಿಕೇಶ್ವರ್, ದೇವಾಲಯದ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರು ಜೆ ಎಸ್ ರಂಗಪ್ಪ, ಕೆ ಎಸ್ ರವಿ, ಲಕ್ಷ್ಮಣಾಯಕ್, ಆರ್ ವಿ ಮಹೇಶ್ ಕುಮಾರ್, ಹೇಮಲತಾ ರಮೇಶ್, ಪ್ರಧಾನ ಅರ್ಚಕ ಆರ್ ಸುಬ್ರಹ್ಮಣ್ಯ, ಸುಬ್ಬ ಶಾಸ್ತ್ರಿ, ಶ್ರೀನಿಧಿ, ಶಂಕರ್ ಹಾಗೂ ದೇವಾಲಯದ ಸಿಬ್ಬಂದಿ ಪೊಲೀಸ್ ಇಲಾಖೆ ಸಿಬ್ಬಂದಿ ಭಾಗವಹಿಸಿದ್ದರು.