ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ತುಘಲಕ್ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯವ್ಯಾಪಿ ಭುಗಿಲೆದ್ದ ಆಕ್ರೋಶ! ಎಂದು ಜೆಡಿಎಸ್ ತಿಳಿಸಿದೆ.
ಔಷಧಿ ಪೂರೈಕೆ, ವರ್ಗಾವಣೆ ದಂಧೆ, ಖಾಲಿ ಹುದ್ದೆ ಭರ್ತಿ, ವೈದ್ಯರ ಮೇಲಿನ ಶೋಷಣೆ ತಡೆಯುವಂತೆ ಒತ್ತಾಯಿಸಿ ರಾಜ್ಯಾದ್ಯಂತ ಒಪಿಡಿ ಸೇವೆ ಬಂದ್ಮಾಡಿ ಸರ್ಕಾರಿ ವೈದ್ಯರ ಮುಷ್ಕರಕ್ಕೆ ಕರೆ ನೀಡಲಾಗಿದೆ ಎಂದು ಜೆಡಿಎಸ್ ಆತಂಕ ವ್ಯಕ್ತಪಡಿಸಿದೆ.
ಕನಿಷ್ಠ ವೇತನಕ್ಕೆ ಆಗ್ರಹಿಸಿ ಸಿಡಿದೆದ್ದ ಅಂಗನವಾಡಿ ಕಾರ್ಯಕರ್ತೆಯರು. ನಿರ್ಮಾಣ ಹಂತದಲ್ಲಿರುವ ಮನೆಗಳಿಗೆ ಒಸಿ ಪ್ರಮಾಣ ಪತ್ರ ನೀಡುವಂತೆ ಆಗ್ರಹಿಸಿದ ಸರ್ಕಾರದ ವಿರುದ್ಧ ವಿದ್ಯುತ್ಗುತ್ತಿಗೆದಾರರ ಸಂಘದಿಂದ ಪ್ರತಿಭಟನೆ.
ಕನ್ನಡ ಮಾಧ್ಯಮ ಶಾಲೆಗಳಿಗೆ ಅನುದಾನ ನೀಡದೆ ಕಾಂಗ್ರೆಸ್ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಕನ್ನಡಪರ ಸಂಘಟನೆಗಳಿಂದ ಬಂದ್ಗೆ ಕರೆ ನೀಡಿವೆ ಎಂದು ಜೆಡಿಎಸ್ ತಿಳಿಸಿದೆ.

