ಚಂದ್ರವಳ್ಳಿ ನ್ಯೂಸ್, ರಾಯಚೂರು:
ಜೆಡಿಎಸ್ ಶಾಸಕಿ ಮನೆಗೆ ಅಪರಿಚಿತರು ನುಗ್ಗಿ ಆತಂಕ ಸೃಷ್ಠಿಸಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ಪಟ್ಟಣದಲ್ಲಿ ನಡೆದಿದೆ.
ದೇವದುರ್ಗ ಕ್ಷೇತ್ರದ ಜೆಡಿಎಸ್ ಶಾಸಕಿ ಕರೆಮ್ಮ ಜಿ.ನಾಯಕ ಅವರ ನಿವಾಸದಲ್ಲಿ ನಿನ್ನೆ ರಾತ್ರಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ದೇವದುರ್ಗ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.
ಶಾಸಕಿ ಮನೆಯ ಕೂಗಳತೆ ದೂರದಲ್ಲಿ ಬೈಕ್ ನಿಲ್ಲಿಸಿದ್ದ ಅಪರಿಚಿತರ ತಂಡ, ಹಿಂಬಾಗಿಲಿನಿಂದ ಮನೆಗೆ ಎಂಟ್ರಿ ಕೊಟ್ಟಿದೆ. ಈ ವೇಳೆ ಅಕ್ಕಪಕ್ಕದವರು ಕೂಗಿದಾಗ ಅಪರಿಚಿತರು ಪರಾರಿಯಾಗಿದ್ದಾರೆ.
ಘಟನೆ ಬಳಿಕ ದೇವದುರ್ಗ ಪೊಲೀಸರಿಗೆ ಶಾಸಕಿ ಕರೆಮ್ಮ ಜಿ.ನಾಯಕ ಮಾಹಿತಿ ನೀಡಿದ್ದಾರೆ. ಅಪರಿಚಿತರು ಯಾಕೆ ನಮ್ಮ ಮನೆಗೆ ನುಗ್ಗಿದ್ದರು ಎಂದು ತನಿಖೆ ನಡೆಸಿ, ಅವರನ್ನು ಪತ್ತೆ ಹಚ್ಚಿ ಕ್ರಮಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಲಾಗಿದೆ ಎಂದು ಶಾಸಕಿ ತಿಳಿಸಿದ್ದಾರೆ.

