ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೊಡ್ಡಬಳ್ಳಾಪುರ ತಾಲೂಕು ಇವರ ವತಿಯಿಂದ ಕಸಬಾ ವಲಯದ ಇಸ್ಲಾಂಪುರ ಗ್ರಾಮದಲ್ಲಿ ಮೊಹಮ್ಮದ್ ಸಿದ್ದಿಕ್ ರವರು ಅನಾರೋಗ್ಯ ದಿಂದ ಬಳಲುತ್ತಿದ್ದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯಿಂದ ಕ್ರಿಟಿಕಲ್ ಇಲ್ ನೆಸ್ ಫಂಡ್ ಕಾರ್ಯಕ್ರಮದಡಿಯಲ್ಲಿ 20,000 ಸಹಾಯಧನ ಮಂಜೂರಾಗಿದ್ದು
ತಾಲ್ಲೂಕಿನ ಯೋಜನಾಧಿಕಾರಿ ದಿನೇಶ್ ಚೆಕ್ ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ದರ್ಗಾ ಜೋಗಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಶಶಿಕಲಾ, ನಗರಸಭೆಯ ಸದಸ್ಯರಾದ ಪ್ರಭಾ ನಾಗರಾಜ್, ವಲಯದ ಮೇಲ್ವಿಚಾರಕಿ ಶಶಿಕಲಾ, ಸೇವಾಪ್ರತಿನಿಧಿಗಳು ಸಂಘದ ಸದಸ್ಯರು ಹಾಜರಿದ್ದರು.