ಎಇಇ ಮನೆ ಕಚೇರಿ ಮೇಲೆ ಲೋಕಾಯುಕ್ತರ ದಿಢೀರ್ ದಾಳಿ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಮಂಡ್ಯದಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.
ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸತೀಶ್ ಅವರ ನಿವಾಸ ಮತ್ತು ಕಚೇರಿ ಸೇರಿದಂತೆ ಒಟ್ಟು ನಾಲ್ಕು ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.

ಮಂಡ್ಯದ ಬಂಡಿಗೌಡ ಬಡಾವಣೆಯಲ್ಲಿರುವ ಎಇಇ ಸತೀಶ್ ಅವರ ಮನೆ ಮೇಲೆ ಲೋಕಾಯುಕ್ತ ತಂಡ ದಾಳಿ ನಡೆಸಿದ್ದು, ದಾಳಿ ವೇಳೆ ಅಪಾರ ಪ್ರಮಾಣದ ಆಸ್ತಿ ದಾಖಲೆಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.

- Advertisement - 

ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾಗ, ಎಇಇ ಸತೀಶ್ ಮತ್ತು ಅವರ ಪತ್ನಿ ಮೌನವಾಗಿದ್ದರು ಎಂದು ವರದಿಯಾಗಿದೆ. ಲೋಕಾಯುಕ್ತ ಅಧಿಕಾರಿಗಳು ಎಲ್ಲಾ ದಾಖಲೆಗಳನ್ನು ಪರಿಶೀಲಿಸಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

- Advertisement - 
Share This Article
error: Content is protected !!
";