ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ಅವರ ಬಗ್ಗೆ ಬೇಕಾಬಿಟ್ಟಿಯಾಗಿ ನಾಲಿಗೆ ಹರಿಬಿಟ್ಟಿದ್ದ ಅಪ್ರಬುದ್ಧ ರಾಹುಲ್ ಗಾಂಧಿ ಅವರಿಗೆ ಸುಪ್ರೀಂಕೋರ್ಟ್ಸರಿಯಾಗಿ ಛೀಮಾರಿ ಹಾಕಿದೆ ಎಂದು ಬಿಜೆಪಿ ತಿಳಿಸಿದೆ.
ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಇನ್ನೊಮ್ಮೆ ಮನಬಂದಂತೆ ಟೀಕಿಸಿದರೆ, ಕೇಸ್ದಾಖಲಿಸಿ ಜೈಲಿಗೆ ಕಳುಹಿಸುತ್ತೇವೆ ಎಂದು ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ ಎಂದು ಬಿಜೆಪಿ ತಿಳಿಸಿದೆ.
ತಮ್ಮ ವೈಯುಕ್ತಿಕ ತೆವಲುಗಳ ಸಾಧನೆಗಾಗಿ ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುವ ಕಾಂಗ್ರೆಸ್ಸಿಗರಿಗೆ ಇನ್ನಾದರೂ ಒಳ್ಳೆಯ ಬುದ್ದಿ ಬರಲಿ ಎಂದು ಬಿಜೆಪಿ ಆಶಿಸಿದೆ.