ಆರೋಪಿ ದರ್ಶನ್‌, ಪವಿತ್ರಾಗೌಡ ಬೇಲ್‌ ರದ್ದು ಆದೇಶ ಕಾಯ್ದಿರಿಸಿದ ಸುಪ್ರೀಂ

News Desk

 ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ದರ್ಶನ್‌ ಹಾಗೂ ಪವಿತ್ರಾಗೌಡ ಸೇರಿ ಒಟ್ಟು ಏಳು ಜನರ ಆರೋಪಿಗಳ ಬೇಲ್‌ ರದ್ದು ವಿಚಾರಕ್ಕೆ ಸಂಬಂಧಿಸಿದ ವಾದ- ಪ್ರತಿವಾದ ಸುಪ್ರೀಂ ಕೋರ್ಟ್‌ನಲ್ಲಿ ನಡೆಯಿತು.

ಸುಪ್ರೀಂಕೋರ್ಟ್‌ ಪೀಠಕ್ಕೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಇಂಚಿಂಚೂ ಮಾಹಿತಿಯನ್ನು ವಕೀಲರು ಸಲ್ಲಿಸಿದರಲ್ಲದೆ ಸಾಂಧರ್ಭಿಕ ಸಾಕ್ಷಿ, ಪ್ರತ್ಯಕ್ಷ ಸಾಕ್ಷಿಗಳ ವಿವರ ಕೂಡ ಸಲ್ಲಿಸಲಾಯಿತು.

- Advertisement - 

ಸರ್ಕಾರದ ಪರ ಸಿದ್ದರ್ಥ್‌ ಲೂತ್ರಾ ವಾದ ಮಂಡಿಸಿದರು. ದರ್ಶನ್‌ ಪರ ವಕೀಲರಾದ ಸಿದ್ದಾರ್ಥ್‌ ದವೆ ವಾದ ಮಂಡಿಸಿದರು. 

ವಾದ-ಪ್ರತಿವಾದ ಆಲಿಸಿದ ಸುಪ್ರೀಂ ಕೋರ್ಟ್ ಆದೇಶ ಕಾಯ್ದಿರಿಸಿತು. ಅಲ್ಲದೆ ಒಂದು ವಾರದೊಳಗೆ ಲಿಖಿತ ರೂಪದಲ್ಲಿ ವಾದಾಂಶ ಸಲ್ಲಿಸಬೇಕು ಎಂದು ನ್ಯಾಯಮೂರ್ತಿ ಪರ್ದಿವಾಲಾ ಆದೇಶಿಸಿದರು.

- Advertisement - 

 

 

 

Share This Article
error: Content is protected !!
";