ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಶಿವಗಿರಿ ಸಂಸ್ಥಾನದ ಬ್ರಹ್ಮಶ್ರಿ ಜ್ಞಾನತೀರ್ಥ ಸ್ವಾಮಿಜಿರವರು ಮಂಗಳವಾರ ಸುವರ್ಣಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿದರು.
31ನೇ ಡಿಸೆಂಬರ್ ರಂದು ನಡೆಯಲಿರುವ ಕೇರಳದ ಶಿವಗಿರಿ ದೇವಸ್ಥಾನ ಉದ್ಘಾಟನಾ ಕಾರ್ಯಕ್ರಮಕ್ಕೆ ಆಹ್ವಾನಿಸಿದರು. AICC ಕಾರ್ಯದರ್ಶಿ ಪಿ.ವಿ.ಮೋಹನ್ ಅವರುಉಪಸ್ಥಿತರಿದ್ದರು.
ಕೇರಳ ವರ್ಕಳದ ಶ್ರೀ ನಾರಾಯಣ ಸಂಘದ ಶಿವಗಿರಿ ಮಠದಲ್ಲಿ ಡಿಸೆಂಬರ್ 31ರಂದು ನಡೆಯಲಿರುವ ಯಾತ್ರಾರ್ಥಿಗಳ ಸಮಾವೇಶದಲ್ಲಿ ಭಾಗವಹಿಸುವಂತೆ ಮಠಾಧೀಶರಾದ ಬ್ರಹ್ಮಶ್ರಿ ಜ್ಞಾನತೀರ್ಥ ಸ್ವಾಮೀಜಿಯವರು ಸುವರ್ಣಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಆಹ್ವಾನ ನೀಡಿದರು.
ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ವಿಧಾನ ಪರಿಷತ್ ಸದಸ್ಯರಾದ ಬಿ.ಕೆ. ಹರಿಪ್ರಸಾದ್ ಹಾಗೂ AICC ಕಾರ್ಯದರ್ಶಿ ಪಿ.ವಿ.ಮೋಹನ್ ಉಪಸ್ಥಿತರಿದ್ದರು.

