ಜೈಲುಗಳಲ್ಲಿ ಭಯೋತ್ಪಾದಕ ಚಟುವಟಿಕೆ, ಎನ್ಐಎ ದಾಳಿಯಿಂದ ಬಹಿರಂಗ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕದ ಜೈಲುಗಳಲ್ಲಿ ಭಯೋತ್ಪಾದಕ ಚಟುವಟಿಕೆಗಳು ನಡೆಯುತ್ತಿರುವುದು ಎನ್ಐಎ ದಾಳಿಯಿಂದ ಬಹಿರಂಗಗೊಂಡಿದೆ. ಈ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

- Advertisement - 

ಬೆಂಗಳೂರಿನಲ್ಲಿ ಮಾತನಾಡಿದ ಅಶೋಕ್ ಅವರು, ಜೈಲಿನಲ್ಲಿರುವ ಉಗ್ರರಿಗೆ ರಾಜಾತಿಥ್ಯ ಸಿಗುತ್ತಿದೆ ಇದಕ್ಕೆ ಗೃಹ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಅಶೋಕ್ ಆರೋಪಿಸಿದ್ದಾರೆ.

- Advertisement - 

ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಅಕ್ರಮ ವಲಸಿಗರನ್ನು ಹೊರಹಾಕಲು ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು. ಜೈಲಿನಲ್ಲಿರುವ ಕೈದಿಗಳ ಚಲನವಲನದ ಬಗ್ಗೆ ನಿಗಾ ವಹಿಸಬೇಕು ಮತ್ತು ಮೊಬೈಲ್ ಫೋನ್‌ಗಳನ್ನು ಜೈಲಿನೊಳಗೆ ತಲುಪುವುದನ್ನು ತಡೆಯಬೇಕೆಂದು ಅಶೋಕ್ ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.

 

- Advertisement - 

Share This Article
error: Content is protected !!
";