ಹರಿಯಬ್ಬೆ ಜಿ.ಡಿ ತಿಮ್ಮಯ್ಯ ಅವರಿಗೆ ಚುಂಚಶ್ರೀ ಪ್ರಶಸ್ತಿ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ನಾಗಮಂಗಲ:
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ವತಿಯಿಂದ ಕೊಡ ಮಾಡುವ ರಾಜ್ಯ ಮಟ್ಟದ ಚುಂಚಶ್ರೀ ಪ್ರಶಸ್ತಿ ಜಾನಪದ ಕ್ಷೇತ್ರದ ಸಾಧಕ ಹರಿಯಬ್ಬೆ ಜಿ.ಡಿ ತಿಮ್ಮಯ್ಯ ಸೇರಿದಂತೆ ಐವರು ಸಾಧಕರಿಗೆ ಚುಂಚಶ್ರೀ ಪ್ರಶಸ್ತಿ ಪ್ರದಾನ ಮಾಡಿತು. 

ಈ ಪ್ರಶಸ್ತಿ ಪ್ರದಾನ ಸಮಾರಂಭವು ಸೆಪ್ಟೆಂಬರ್ 24, 2025 ರಂದು ಶ್ರೀ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮಿ ಅವರು ಉದ್ಘಾಟಿಸಿದ 46ನೇ ರಾಜ್ಯಮಟ್ಟದ ಶ್ರೀ ಕಾಲಭೈರವೇಶ್ವರ ಜಾನಪದ ಕಲಾಮೇಳದ ಸಮಾರಂಭ ಉದ್ಘಾಟಿಸಿದ ಬಳಿಕ ಸಾಧಕರಿಗೆ ಚುಂಚಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು.

- Advertisement - 

ಹರಿಯಬ್ಬೆ ಜಿ.ಡಿ ತಿಮ್ಮಯ್ಯ ಅವರಿಗೆ ಚುಂಚಶ್ರೀ ಪ್ರಶಸ್ತಿ ಜೊತೆಯಲ್ಲಿ 50 ಸಾವಿರ ರೂ.ನಗದು ಸೇರಿದಂತೆ ನೆನಪಿನ ಕಾಣಿಕೆ ನೀಡಿ ಆತ್ಮೀಯವಾಗಿ ಗೌರವಿಸಿದರು.

 

- Advertisement - 

 

Share This Article
error: Content is protected !!
";