ನಬಾರ್ಡ್‌ನ ಕೃಷಿ ಸಾಲ ಹೆಚ್ಚಿಸಲು ಕೇಂದ್ರ ಹಣಕಾಸು ಸಚಿವೆಗೆ ಮನವಿ ಮಾಡಿದ ಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ
ಅವರು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ‌ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ನಬಾರ್ಡ್‌ನ ಕೃಷಿ ಸಾಲವನ್ನು ಶೇ.58 ಕಡಿತ ಮಾಡಿರುವುದರಿಂದ ರಾಜ್ಯದ ರೈತರಿಗೆ ಬಹುದೊಡ್ಡ ಸಂಕಷ್ಟ ಎದುರಾಗಿದೆ,

ಹಾಗಾಗಿ ಈ ಸಾಲದ ಮಿತಿಯನ್ನು ಹೆಚ್ಚಿಸಿ ರೈತರ ಹಿತಕಾಯುವಂತೆ ಮನವಿ ಮಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಕೇಂದ್ರ ಸರ್ಕಾರದ ಹಣಕಾಸು ಮಂತ್ರಿಗಳಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ  ನಬಾರ್ಡ್ ನೆರವು ಕಡಿತಗೊಳಿಸದಂತೆ ಮನವಿ ಮಾಡಿದರು.

- Advertisement - 

ಕಳೆದ ಸಾಲಿನಲ್ಲಿ  ನಬಾರ್ಡ್ ನೆರವು 5400 ಕೋಟಿ ರೂಪಾಯಿಗಳಷ್ಟಿದ್ದು, ಈ ಬಾರಿ  2400 ಕೋಟಿ ರೂಗಳಿಗೆ ಕಡಿತಗೊಳಿಸಲಾಗಿದೆ. ಈ ಕುರಿತು ನಿರ್ಮಲಾ ಸೀತಾರಾಮನ್ ಅವರ ಗಮನ ಸೆಳೆದ ಮುಖ್ಯಮಂತ್ರಿಗಳು ಈ ವ್ಯತ್ಯಾಸ ಸರಿಪಡಿಸಲು ಕೋರಿದರು.

 ಈ ನಿಯೋಗದಲ್ಲಿ  ಸಚಿವರಾದ ಬೈರತಿ ಸುರೇಶ್, ಚೆಲುವರಾಯಸ್ವಾಮಿ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಹಾಗೂ ಶಾಸಕರು ಉಪಸ್ಥಿತರಿದ್ದರು.

- Advertisement - 

 

 

Share This Article
error: Content is protected !!
";