ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಆಡಳಿತ ಪಕ್ಷದ ಪರಿಶಿಷ್ಟ ಜಾತಿಯ ಶಾಸಕರುಗಳ ಜೊತೆಗೆ 2026-27ನೇ ಸಾಲಿನ ಆಯವ್ಯಯ ಕುರಿತಾಗಿ ಸಭೆ ನಡೆಸಿ, ಸಮುದಾಯದ ಬೇಡಿಕೆಗಳನ್ನು ಆಲಿಸಿದರು.
ಪರಿಶಿಷ್ಟ ಜಾತಿಯ ಸಚಿವರು ಮತ್ತು ಶಾಸಕರುಗಳು, ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಸರ್ಕಾರದ ಮುಖ್ಯಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಮತ್ತು ಆರ್ಥಿಕ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

