ಒಂದು ವರ್ಗ, ಧರ್ಮದ ಜನರನ್ನು ಕಾಂಗ್ರೆಸ್ ಸರ್ಕಾರ ಓಲೈಸಿಲ್ಲ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಮ್ಮ ಸರ್ಕಾರ ಎಂದಿಗೂ ಒಂದು ವರ್ಗ, ಧರ್ಮದ ಜನರನ್ನು ಓಲೈಸಲು ಯಾವುದೇ ಕಾರ್ಯಕ್ರಮ ಕೈಗೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕನ್ನಡ ನಾಡು ಸರ್ವಜನಾಂಗದ ಶಾಂತಿಯ ತೋಟವಾಗಬೇಕೆಂಬುದು ನಮ್ಮ ಆಶಯ. ದೇಶದಲ್ಲಿ ಭಿನ್ನ ಜಾತಿ – ಧರ್ಮಗಳಿಗೆ ಕೂಡಿದ್ದರೂ ನಾವೆಲ್ಲರೂ ಮೊದಲು ಮಾನವರಾಗಬೇಕು. ಯಾವ ಧರ್ಮವೂ ಮನುಷ್ಯತ್ವದ ಹೊರತಾದ ಮೃಗೀಯ ತತ್ವವನ್ನು ಬೋಧಿಸುವುದಿಲ್ಲ. ಮಾನವತಾ ಸಮಾಜವನ್ನು ನಿರ್ಮಿಸಬೇಕು. ದ್ವೇಷ, ಆಸೂಯೆಗಳಿಂದ ಯಾವ ಸಾಧನೆಯೂ ಸಾಧ್ಯವಿಲ್ಲ.

ಸಮಸಮಾಜ, ಸೌಹಾರ್ದಯುತ ಸಮಾಜ ನಿರ್ಮಾಣವಾಗಬೇಕಾದರೆ ಪರಸ್ಪರ ಗೌರವಾದರಗಳು ಇರಬೇಕು ಮುಖ್ಯಮಂತ್ರಿ ತಿಳಿಸಿದರು.

Share This Article
error: Content is protected !!
";