ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಸರ್ಕಾರವು ಯಶಸ್ವಿ 2 ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆಸುತ್ತಿರುವ ಸಾಧನಾ ಸಮಾವೇಶದ ಸ್ಥಳವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರೊಂದಿಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪರಿಶೀಲಿಸಿ, ಸುದ್ದಿಗೋಷ್ಟಿ ನಡೆಸಿ, ಮಾತನಾಡಿದರು.
ವಿಜಯನಗರ ಜಿಲ್ಲೆಯ 71,000 ರೈತರನ್ನು ಪೋಡಿ ಮುಕ್ತರನ್ನಾಗಿ ಮಾಡಿದ್ದೇವೆ. ಇದು ನಮ್ಮ ಸಾಧನೆ. ಸರ್ಕಾರದ ಸಾಧನೆಗಳನ್ನು ಸಂಭ್ರಮಿಸಲು, ಸರ್ವರನ್ನೂ ಸಾಧನಾ ಸಮಾವೇಶದಲ್ಲಿ ಮುಕ್ತವಾಗಿ ಪಾಲ್ಗೊಳ್ಳಲು ಆಹ್ವಾನಿಸುತ್ತಿದ್ದೇವೆ.
ಪ್ರತಿ ತಾಲ್ಲೂಕಿನಿಂದಲೂ ಪ್ರತಿನಿಧಿಗಳು ಬರಬೇಕು. 3 ಲಕ್ಷಕ್ಕೂ ಹೆಚ್ಚು ಜನರು ಈ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳುವಂತೆ ವ್ಯವಸ್ಥೆ ಮಾಡಲಾಗಿದೆ ತಿಳಿಸಿದರು.