ಚಂದ್ರವಳ್ಳಿ ನ್ಯೂಸ್, ಬೆಂಗಳೂರು :
“ಕೇಡುಗಾಲಕ್ಕೆ ನಾಯಿ ಮೊಟ್ಟೆ ಇಟ್ಟಂತೆ” ಹಾಗೇ ಆಗಿದೆ ಕಾಂಗ್ರೆಸ್ಸಿಗರ ದೌಲತ್ತು ಎಂದು ಜೆಡಿಎಸ್ ಟೀಕಾಪ್ರಹಾರ ಮಾಡಿದೆ.
ಮಾನವೀಯತೆಯನ್ನೇ ಮರೆತಿರುವ ಕಟುಕ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಸಚಿವ ಶರಣ ಬಸಪ್ಪ ದರ್ಶನಾಪುರ ನಿಮಗೆ ನಾಚಿಕೆಯಾಗಬೇಕು.
ಆರ್ಸಿಬಿ ವಿಜಯೋತ್ಸವ ಕಾಲ್ತುಳಿತದಲ್ಲಿ ಮೃತಪಟ್ಟ ಯಾದಗಿರಿಯ ಶಿವಲಿಂಗ ಕುಟುಂಬಕ್ಕೆ ಡಿಸಿ ಕಚೇರಿಯಲ್ಲಿ 30 ನಿಮಿಷ ನಿಲ್ಲಿಸಿ ಪರಿಹಾರ ನೀಡಲಾಗಿದೆ. ಸಚಿವರೇ ನೀವು ಆರಾಮಾವಾಗಿ ಕುರ್ಚಿಯಲ್ಲಿ ಕುಳಿತು, ಸಂತ್ರಸ್ತ ಕುಟುಂಬಸ್ಥರಿಗೆ ನಿಲ್ಲಿಸಿದ್ದು ಅಕ್ಷಮ್ಯ. ಮಗನನ್ನು ಕಳೆದುಕೊಂಡ ಆ ಕುಟುಂಬಕ್ಕೆ ಅಗೌರವ ತೋರಿದ ನಿಮ್ಮದು ಅದೆಂಥಹ ಕಲ್ಲು ಹೃದಯ ? ಎಂದು ಜೆಡಿಎಸ್ ತರಾಟೆ ತೆಗೆದುಕೊಂಡಿದೆ.