ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನ ಉಚ್ಛಾಟನೆ

News Desk

ಚಂದ್ರವಳ್ಳಿ ನ್ಯೂಸ್, ಕಲಬುರಗಿ:
ಮುಂಬೈ ಪೊಲೀಸರಿಂದ ಮಾದಕ ದ್ರವ್ಯ ಸಾಗಾಟ ಆರೋಪದಲ್ಲಿ ಬಂಧಿತನಾಗಿರುವ ಕಲಬುರಗಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ್ ಕಣ್ಣಿ ಅವರನ್ನು ಉಚ್ಛಾಟನೆ ಮಾಡಲಾಗಿದೆ.

- Advertisement - 

ಮಾದಕ ದ್ರವ್ಯ ಸಾಗಣೆ ಪ್ರಕರಣದಲ್ಲಿ ಪೊಲೀಸರಿಂದ ಬಂಧನವಾಗಿರುವ ಲಿಂಗರಾಜ್ ಕಣ್ಣಿಯನ್ನು ಪಕ್ಷದ ಪ್ರಾಥಮಿಕ ಸದಸ್ಯ ಸ್ಥಾನದಿಂದ ಉಚ್ಚಾಟನೆ ಮಾಡಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಗದೇವ ಗುತ್ತೇದಾರ ಅವರು ಆದೇಶ ಹೊರಡಿಸಿದ್ದಾರೆ.

- Advertisement - 

 ನಿಷೇಧಿತ 120ಕ್ಕೂ ಹೆಚ್ಚು ಎನ್​ರೆಕ್ಸ್ ಬಾಟಲ್​ಗಳನ್ನು ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ತೌಸಿಫ್‌ ಆಸಿಫ್ ತುರವೇ (A1) ಕಲಬುರಗಿಯ ಲಿಂಗರಾಜ ಕಣ್ಣಿ (A2) ಹಾಗೂ ಸಯ್ಯದ್ ಇರ್ಫಾನ್​ (A3) ಬಂಧಿತರಾಗಿದ್ದು, ಮಹಾರಾಷ್ಟ್ರದ ಥಾಣೆಯಲ್ಲಿ ಮೂವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವುದಾಗಿ ಮುಂಬೈನ ಬಜಾರ್​ಪೇಠ್​ ಪೊಲೀಸ್​ ಮೂಲಗಳು ತಿಳಿಸಿವೆ.

 

- Advertisement - 

Share This Article
error: Content is protected !!
";