ದಲಿತ ಮುಖಂಡ ಎಂ.ಜಯಣ್ಣ ದಾರಿಯಲ್ಲಿ ಹೋರಾಟಗಾರರು ಸಾಗಬೇಕಿದೆ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಸಂಘಟನೆಗಳು ನೂರಾರು ಹುಟ್ಟಿಕೊಂಡಿರುವ ಈ ಕಾಲದಲ್ಲಿ ಸಂಘಟನೆಯನ್ನು ಸ್ವಾರ್ಥಕ್ಕೆ ಬಳಸಿಕೊಳ್ಳಬಾರದೆಂದು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಜಯಣ್ಣ ತಿಳಿಸಿದರು.

ಕರ್ನಾಟಕ ಜನಶಕ್ತಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಟ್ರೇಡ್ ಯೂನಿಯನ್ ಜಿಲ್ಲಾ ಘಟಕದ ವತಿಯಿಂದ ಪ್ರವಾಸಿ ಮಂದಿರದಲ್ಲಿ ಬುಧವಾರ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

- Advertisement - 

ದಲಿತ ಮುಖಂಡ ಎಂ.ಜಯಣ್ಣ ಹೋರಾಟಕ್ಕೆ ಬುನಾದಿ ಹಾಕಿದ್ದಾರೆ. ದಲಿತರ ಮೇಲೆ ಎಲ್ಲಿಯೇ ದೌರ್ಜನ್ಯ, ದಬ್ಬಾಳಿಕೆಯಾದರೆ ನ್ಯಾಯಕ್ಕಾಗಿ ಬೀದಿಗಿಳಿಯುತ್ತಿದ್ದರು. ಅಂತಹವರ ಹಾದಿಯಲ್ಲಿ ಈಗಿನ ಹೋರಾಟಗಾರರು ಸಾಗಬೇಕಿದೆ ಎಂದು ಕರೆ ನೀಡಿದರು.

ಸಂಘಟನೆಗಳು ಜನರಿಗೆ ಮೋಸ ಮಾಡಬಾರದು. ನಿಜವಾದ ಕಾರ್ಮಿಕರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಕೊಡಿಸುವಲ್ಲಿ ಪ್ರಾಮಾಣಿಕವಾಗಿ ಶ್ರಮಿಸಬೇಕು. ಕಾರ್ಮಿಕರಿಗೆ ಆರೋಗ್ಯ ವಿಮೆ, ಮೃತಪಟ್ಟಾಗ ಪರಿಹಾರ ಸಿಗಬೇಕಿದೆ. ಇದರ ಬಗ್ಗೆ ಸಂಘಟನೆ ಹೆಚ್ಚು ಕಾಳಜಿ ವಹಿಸುವಂತೆ ಜಯಣ್ಣ ಮನವಿ ಮಾಡಿದರು.

- Advertisement - 

ಕರ್ನಾಟಕ ಜನಶಕ್ತಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಟ್ರೇಡ್ ಯೂನಿಯನ್ ಜಿಲ್ಲಾ ಘಟಕದ ಅಧ್ಯಕ್ಷ ವೆಂಕಟೇಶ್ ಮಾತನಾಡಿ ಎಂತಹುದೆ ಸಂದರ್ಭದಲ್ಲಿ ಸಂಘಟನೆಯನ್ನು ದುರ್ಬಳಕೆ ಮಾಡಿಕೊಳ್ಳಬಾರದು. ನೊಂದವರ ಪರವಾಗಿರಬೇಕು. ಜಿಲ್ಲೆಯಲ್ಲಿ ಸಂಘಟನೆಯನ್ನು ಬಲಿಷ್ಟವಾಗಿ ಕಟ್ಟುವುದರ ಜೊತೆಗೆ ಪ್ರತಿ ತಾಲ್ಲೂಕಿನಲ್ಲಿಯೂ ಪದಾಧಿಕಾರಿಗಳನ್ನು ಆಯ್ಕೆ ಮಾಡುವಂತೆ ಹೇಳಿದರು.

ರಾಜ್ಯ ಉಸ್ತುವಾರಿ ನಾಗರಾಜ್ ಹಿರಿಯೂರು, ಉಪಾಧ್ಯಕ್ಷ ಪಾಂಡುರಂಗಪ್ಪ ಎನ್. ಪ್ರಧಾನ ಕಾರ್ಯದರ್ಶಿ ಎಂ.ದುರುಗೇಶ್, ಕಣಿವೆಮಾರಮ್ಮ ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ ಬೆಳಗಟ್ಟ, ಲೇಖಕ ಆನಂದಕುಮಾರ್, ಸ್ಲಂ ಜನರ ಸಂಘಟನೆ ಜಿಲ್ಲಾಧ್ಯಕ್ಷ ಟಿ.ಮಂಜಣ್ಣ, ಮಹೇಶ್, ರಂಗಸ್ವಾಮಿ, ಬಸವರಾಜ್, ಹಾಲೇಶ್ ಇನ್ನು ಅನೇಕರು ಸಭೆಯಲ್ಲಿ ಹಾಜರಿದ್ದರು.

 

Share This Article
error: Content is protected !!
";