ಬಡ ರೋಗಿಗಳ ಜೇಬಿಗೂ ಕತ್ತರಿ ಹಾಕುವ ಗ್ಯಾರಂಟಿ ನೀಡಿದ ಸರ್ಕಾರ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಒಂದೂವರೆ ವರ್ಷ ಪೂರೈಸುತ್ತಿರುವ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಶೂನ್ಯ ಆಡಳಿತ ಹಾಗೂ ವ್ಯಾಪಕ ಭ್ರಷ್ಟಾಚಾರದಲ್ಲಿ ಮುಳುಗಿ ದಿನಕ್ಕೊಂದು ಬೆಲೆ ಏರಿಕೆಯ ಬರೆ ಎಳೆಯುತ್ತಿದೆ ಎಂದು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ಇದೀಗ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ದರವನ್ನು ಹೆಚ್ಚಿಸಿ ನಾಡಿನ ಬಡ ರೋಗಿಗಳ ಜೇಬಿಗೂ ಕತ್ತರಿ ಹಾಕುವ ಗ್ಯಾರಂಟಿ ನೀಡುತ್ತಿರುವುದು ದುರ್ದೈವದ ಸಂಗತಿ.

ಬರಿದಾಗಿರುವ ತಮ್ಮ ಬೊಕ್ಕಸ ತುಂಬಿಸಿಕೊಳ್ಳಲು ಒಂದಿಲ್ಲೊಂದು ಬೆಲೆ ಏರಿಕೆಯ ದಾರಿ ಹುಡುಕುತ್ತಿರುವ ರಾಜ್ಯ ಸರ್ಕಾರ, ಸರ್ಕಾರಿ ಆಸ್ಪತ್ರೆಗಳ ಚಿಕಿತ್ಸಾ ದರವನ್ನು 20% ಹೆಚ್ಚಿಸಿದೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಉಚಿತ ಭಾಗ್ಯಗಳ ಕೊಟ್ಟೆವೆಂದು ಆರೋಗ್ಯ ಭಾಗ್ಯವನ್ನೇ ಕಸಿದುಕೊಳ್ಳುತ್ತಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಸಾಮಾನ್ಯರು ಬೀದಿಗಿಳಿಯುವ ಕಾಲ ದೂರವಿಲ್ಲ ಎಂದು ವಿಜಯೇಂದ್ರ ಎಚ್ಚರಿಸಿದ್ದಾರೆ.

 

 

Share This Article
error: Content is protected !!
";