ಜುಲೈ 06ರಂದು ಮಾಜಿ ಸೈನಿಕರ ಕುಂದುಕೊರತೆ ಸಭೆ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿ ಆವರಣದ  ಸರ್ಕಾರಿ ನೌಕರರ ಭವನದಲ್ಲಿ ಇದೇ ಜುಲೈ
06ರಂದು ಬೆಳಿಗ್ಗೆ 10.30ಕ್ಕೆ ಮಾಜಿ ಸೈನಿಕರ ಕುಂದುಕೊರತೆ ಸಭೆ ಆಯೋಜಿಸಲಾಗಿದೆ.

- Advertisement - 

ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ನಿರ್ದೇಶಕರು ಕುಂದುಕೊರತೆ ಸಭೆಗೆ ಆಗಮಿಸಿ, ಮಾಜಿ ಸೈನಿಕರ ಅಹವಾಲು ಆಲಿಸುವರು. ಶಿವಮೊಗ್ಗ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳ ವ್ಯಾಪ್ತಿಯ ಮಾಜಿ ಸೈನಿಕರು, ಅವರ ಅವಲಂಬಿತರು,

- Advertisement - 

ವೀರನಾರಿಯರು ಹಾಗೂ ವಿವಿಧ ಮಾಜಿ  ಸೈನಿಕರ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದು, ತಮ್ಮ ಕುಂದುಕೊರತೆಗಳ ಕುರಿತಂತೆ ಖುದ್ದಾಗಿ ನಿರ್ದೇಶಕರನ್ನು ಭೇಟಿಯಾಗಿ ಮನವಿ ಸಲ್ಲಿಸಬಹುದು.

ಕುಂದುಕೊರತೆಗಳನ್ನು ಇದೇ ಜುಲೈ 05ರ ಸಂಜೆ 5 ಗಂಟೆಯೊಳಗಾಗಿ [email protected]  ಗೆ  ಮಿಂಚಂಚೆ ಮೂಲಕವೂ ಸಲ್ಲಿಸಲು ಕೋರಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182220925 ಅನ್ನು ಸಂಪರ್ಕಿಸಬಹುದು ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ಡಾ.ಸಿ..ಹಿರೇಮಠ ತಿಳಿಸಿದ್ದಾರೆ.

- Advertisement - 

 

Share This Article
error: Content is protected !!
";