ಆರೋಗ್ಯ ಇಲಾಖೆಯ ಆರೋಗ್ಯವೇ ಕೆಟ್ಟುಹೋಗಿದೆ-ಆರ್.ಅಶೋಕ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ರಾಜ್ಯದ ಆರೋಗ್ಯ ಇಲಾಖೆಯ ಆರೋಗ್ಯವೇ ಕೆಟ್ಟುಹೋಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

- Advertisement - 

ಸರ್ಕಾರಿ ಆಸ್ಪತ್ರೆಗಳಲ್ಲಿ 2,000 ವೈದ್ಯರ ಹುದ್ದೆ ಖಾಲಿ ಇವೆ. ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಡೆಂಘೀ ಪ್ರಕರಣಗಳು 25,000 ಗಡಿ ದಾಟಿದೆ.

- Advertisement - 

ಬಿಲ್ ಪಾವತಿ ಮಾಡಲಾಗದೆ 14 ಜಿಲ್ಲಾಸ್ಪತ್ರೆಗಳಲ್ಲಿ CT, MRI ಸ್ಕ್ಯಾನಿಂಗ್ ಸ್ಥಗಿತವಾಗಿದೆ ಎಂದು ಸರ್ಕಾರದ ವಿರುದ್ಧ ಅವರು ಕಿಡಿ ಕಾರಿದ್ದಾರೆ.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಜೀವರಕ್ಷಕ ಔಷಧಿಗಳ ಅನುದಾನ 40% ಕಟ್. 3,500 ಆಂಬುಲೆನ್ಸ್ ಚಾಲಕರಿಗೆ 3 ತಿಂಗಳಿಂದ ಸಂಬಳ ಇಲ್ಲ. ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಒಂದೇ ದಿನ ಮೂವರು ಗರ್ಭಿಣಿ ಮಹಿಳೆಯರ ಸಾವು ಕಂಡಿದ್ದಾರೆ.

- Advertisement - 

ಸರ್ಕಾರಿ ಆಸ್ಪತ್ರೆಗಳಲ್ಲಿ 250ಕ್ಕೂ ಹೆಚ್ಚು ಔಷಧಿಗಳು No Stock ಲಿಸ್ಟ್ ನಲ್ಲಿವೆ. ಇಷ್ಟೆಲ್ಲಾ ಎಡವಟ್ಟುಗಳ ಮೇಲೆ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೇವೆಗಳ ದರ 20% ಹೆಚ್ಚಳವಾಗಿದೆ ಎಂದು ಆರ್.ಅಶೋಕ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಒಂದು ವೇಳೆ ಸಂಪುಟ ಪುನಾರಚನೆ ಆದರೆ ಬಹುಶಃ ಮೊದಲು ತಲೆದಂಡ ಆಗಬೇಕಾಗಿರುವುದು ಆರೋಗ್ಯ ಸಚಿವರದೇ! ಎಂದು ಅವರು ವ್ಯಂಗ್ಯವಾಡಿದ್ದಾರೆ.

 

 

 

Share This Article
error: Content is protected !!
";