ಕುಡಿದ ಅಮಲಿನಲ್ಲಿ ಎಟಿಎಂ ಧ್ವಂಸ ಮಾಡಿದ ಕಿಡಿಗೇಡಿ

News Desk

ಚಂದ್ರವಳ್ಳಿ ನ್ಯೂಸ್, ತುರುವೇಕೆರೆ:
ವ್ಯಕ್ತಿಯೋರ್ವ ಕುಡಿದ ಅಮಲಿನಲ್ಲಿ ಎಸ್​​ಬಿಐ ಎಟಿಎಂ ಧ್ವಂಸಗೊಳಿಸಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆಯಲ್ಲಿ ನಡೆದಿದೆ.

ಕುಡಿದು ಅಮಲಿನಲ್ಲಿದ್ದ ವಡಿವೇಲು ಸ್ವಾಮಿ ಎನ್ನುವ ವ್ಯಕ್ತಿ, ಎಟಿಎಂಗೆ ತೆರಳಿ ಹಣ ಡ್ರಾ ಮಾಡಲು ಯತ್ನಿಸಿದಾಗ, ದುಡ್ಡು ಬಂದಿರಲಿಲ್ಲ.

- Advertisement - 

ಹೀಗಾಗಿ ರೊಚ್ಚಿಗೆದ್ದ ವಡಿವೇಲು ಸ್ವಾಮಿ, ಕಲ್ಲಿನಿಂದ ಹೊಡೆದು ಎಟಿಎಂ ಧ್ವಂಸಗೊಳಿಸಿದ್ದ. ನವೆಂಬರ್​​ 27ರ ರಾತ್ರಿ ಘಟನೆ ನಡೆದಿತ್ತು. ಸ್ಥಳೀಯರ ದೂರಿನ ಅನ್ವಯ ಇದು ಕಳ್ಳತನ ಆಗಿರಬಹುದೆಂದು ಪೊಲೀಸರು ತನಿಖೆ ಆರಂಭಿಸಿದ್ದರು.

 ಈ ವೇಳೆ ಕುಡುಕ ಮಹಾಶಯನ ಕೃತ್ಯ ಕಂಡು ಪೊಲೀಸರೇ ಶಾಕ್​​ ಆಗಿದ್ದಾರೆ. ಸಿಸಿಟಿವಿ ಪರಿಶೀಲನೆ ವೇಳೆ ಕುಡುಕನ ಹುಚ್ಚಾಟ ಬಯಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

- Advertisement - 

 

 

Share This Article
error: Content is protected !!
";