ರಾಮನಗರ ಜಿಲ್ಲೆಯ ಹೆಸರು ಬದಲಾಯಿಸಿಯೇ ತೀರುತ್ತೇವೆ-ಡಿಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜಿಲ್ಲೆಗಳ ಹೆಸರು ಬದಲಾವಣೆ ರಾಜ್ಯದ ವಿಷಯ. ಅದರಲ್ಲಿ ಕೇಂದ್ರ ಹಸ್ತಕ್ಷೇಪ ಮಾಡುವಂತಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

- Advertisement - 

ಇದಕ್ಕೆ ಕೇಂದ್ರದ ಎಲ್ಲ ಇಲಾಖೆಗಳು ಒಪ್ಪಿಗೆ ನೀಡಿದ್ದವು. ಆದರೆ, ಕೇಂದ್ರದಲ್ಲಿ ಸಚಿವರಾಗಿರುವ ರಾಜ್ಯದ ಕೆಲವರು ಗೃಹ ಇಲಾಖೆಯ ಮೇಲೆ ಒತ್ತಡ ತಂದು ಪತ್ರ ಬರೆಸಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ಹೆಸರೇಳದೆ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ.

- Advertisement - 

ಜಿಲ್ಲೆಯ ಹೆಸರು ಬದಲಾಯಿಸಿಯೇ ತೀರುತ್ತೇವೆ. ಅವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ರಾಮನಗರದ ಜನರ ಮೇಲೆ ಗದಾಪ್ರಹಾರ ಮಾಡಿದ್ದಾರೆ ಎಂದು ಡಿಸಿಎಂ ಡಿಕೆಶಿ ದೂರಿದರು.

 

- Advertisement - 

 

Share This Article
error: Content is protected !!
";