ಸುಳ್ಳು ಸುದ್ದಿ ಹರಡದಂತೆ ಪೊಲೀಸರು ಕಟ್ಟೆಚ್ಚರ ವಹಿಸಬೇಕು-ಆಯುಕ್ತರು

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕದ ಪೊಲೀಸ್​ ಇಲಾಖೆ ಅಲರ್ಟ್ ಆಗಿದ್ದು
, ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ಧ ಕ್ರಮಕೈಗೊಳ್ಳುವಂತೆ ಬೆಂಗಳೂರು ನಗರ ಪೊಲೀಸ್ ಕಮಿಷನರ್​ ದಯಾನಂದ್ ಅಧೀನಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಪಹಲ್ಗಾಮ್ ಉಗ್ರರ ದಾಳಿಗೆ ಪ್ರತಿಯಾಗಿ ಭಾರತೀಯ ಸೇನೆ ಆಪರೇಷನ್ ಸಿಂಧೂರ ಮೂಲಕ ಪ್ರತ್ಯುತ್ತರ ನೀಡಿದೆ.

ಸದ್ಯ ಭಾರತ ಹಾಗೂ ಪಾಕಿಸ್ತಾನ ಮಧ್ಯೆ ಯುದ್ಧದ ಭೀತಿ ಸೃಷ್ಟಿಯಾಗಿದ್ದು ಭಾರತದ ಗಡಿ ಭಾಗಗಳಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆಯುತ್ತಿರುವ ಹೊತ್ತಿನಲ್ಲಿ ಸಾಮಾಜಿಕ ಜಾಲತಾಣ ಸೇರಿದಂತೆ ಮತ್ತಿತರ ಸುದ್ದಿ ಮಾಧ್ಯಮಗಳು ಸುಳ್ಳು ಸುದ್ದಿಗಳನ್ನು ಹರಡದಂತೆ ಆಯುಕ್ತರು ಸೂಚನೆ ನೀಡಿದ್ದಾರೆ.

ನಗರದಲ್ಲಿ ಮಾಸಿಕ ಕವಾಯತು ಕಾರ್ಯಕ್ರಮದಲ್ಲಿ ಮಾತನಾಡಿದ ದಯಾನಂದ್ ಅವರು, ಭಾರತದ ಗಡಿ ಆಚೆ ಮತ್ತು ಗಡಿ ಭಾಗಗಳಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆಯುತ್ತಿವೆ. ಅವಶ್ಯ ಸಾಮಗ್ರಿ ಶೇಖರಿಸಲಾಗುತ್ತಿದೆ ಎನ್ನುವ ಮಾಹಿತಿ ಕೇಳಿ ಬರುತ್ತಿದೆ. ಹಾಗಾಗಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಸೂಚಿಸಲಾಗಿದೆ. ಎಲ್ಲ ಕಡೆ ಸಾಮಾನ್ಯವಾದ ಭದ್ರತೆ ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಗಡಿಯಲ್ಲಿ ಉದ್ವಿಗ್ನತೆ ನಿರ್ಮಾಣವಾಗಿದ್ದು ಪೊಲೀಸರು ಜಾಗರೂಕತೆಯಿಂದ ಕರ್ತವ್ಯ ನಿರ್ವಹಿಸಬೇಕು. ಜನರು ಆತಂಕಕ್ಕೆ ಒಳಗಾಗದ ರೀತಿ ತಿಳಿವಳಿಕೆ ನೀಡಬೇಕು. ಸುಳ್ಳು ಸುದ್ದಿ ಹರಡದಂತೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.

ದೇಶದಲ್ಲಿನ ಸದ್ಯದ ವಸ್ತುಸ್ಥಿತಿಯ ಪರಿಸ್ಥಿತಿಯನ್ನು ಸಾರ್ವಜನಿಕರಿಗೆ ಸರಿಯಾಗಿ ಮಾಹಿತಿ ನೀಡಬೇಕು. ಬೆಂಗಳೂರಿನಲ್ಲಿ ಡಿಸಿಪಿಗಳು ಹಾಗೂ ಎಸಿಪಿಗಳು ನಿಗಾ ವಹಿಸಬೇಕು. ಕೇಂದ್ರ, ರಾಜ್ಯ ಸರ್ಕಾರದ ಸೂಚನೆ ಪಾಲಿಸಬೇಕು. ಮಾಕ್ ಡ್ರಿಲ್ ಬಗ್ಗೆ ಜನರಿಗೆ ಪೊಲೀಸರು ಅರಿವು ಮೂಡಿಸಬೇಕು ಎಂದು ಆಯುಕ್ತರು  ಸೂಚನೆ ನೀಡಿದ್ದಾರೆ.

Share This Article
error: Content is protected !!
";