ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ರಾಷ್ಟ್ರದ ಭವಿಷ್ಯ ಉಜ್ವಲಗೊಳಿಸಿದ ಏಕೈಕ ಪಕ್ಷವೆಂದರೆ ಅದು ಕಾಂಗ್ರೆಸ್ ಮಾತ್ರ. ಸುಮಾರು ೧೪೦ ವರ್ಷಗಳಿಂದ ದೇಶದ ಎಲ್ಲಾ ಜನಾಂಗದ ಹಿತವನ್ನು ಕಾಪಾಡುವಲ್ಲಿ ಕಾಂಗ್ರೆಸ್ ಬದ್ದವಾಗಿದೆ. ಕಾಂಗ್ರೆಸ್ ಪಕ್ಷದ ಸರ್ವತೋಮುಖ ಬೆಳವಣಿಗೆಗೆ ಪಕ್ಷದ ಕಾರ್ಯಕರ್ತರು ಶ್ರಮಿಸಿದ್ದು ಕಾರ್ಯಕರ್ತರ ಸೇವೆಯ ಬಗ್ಗೆ ಪಕ್ಷಕ್ಕೆ ಅಪಾರಗೌರವವಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತಮ ಆಡಳಿತದ ಮೂಲಕ ಜನರ ಮನಸ್ಸು ಗೆದ್ದಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜ್ಯಾಧ್ಯಕ್ಷರಾಗಿ ಪಕ್ಷದ ಬೆಳವಣಿಗೆಗೆ ಶ್ರಮಿಸಿದ್ದಾರೆ. ವಿಶೇಷವಾಗಿ ರಾಜ್ಯದಲ್ಲಿ ನಡೆದ ರಾಹುಲ್ಗಾಂಧಿಯವರ ಭಾರತ್ ಜೋಡೋ ಯಾತ್ರೆ ಪಕ್ಷಕ್ಕೆ ಹೊಸ ಶಕ್ತಿ ತಂದುಕೊಟ್ಟಿತ್ತು ಎಂದು ರಾಜ್ಯ ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ ತಿಳಿಸಿದರು.
ನಗರದ ಶಾಸಕರ ಭವನದ ಆವರಣದಲ್ಲಿ ಶನಿವಾರ ಪಕ್ಷ ಹಮ್ಮಿಕೊಂಡಿದ್ದ ಸರ್ಕಾರದ ನಡೆ, ಕಾರ್ಯಕರ್ತರ ಕಡೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಎರಡನೇ ಬಾರಿಗೆ ಅಧಿಕಾರಕ್ಕೆ ಬಂದ ನಂತರ ಚುನಾವಣೆಯಲ್ಲಿ ನೀಡಿದ ಐದು ಗ್ಯಾರಂಟಿಗಳನ್ನು ಜನರಿಗೆ ತಲುಪಿಸುವ ಮೂಲಕ ಸರ್ಕಾರ ಹಾಗೂ ಪಕ್ಷ ಜನರ ವಿಶ್ವಾಸಗಳಿಸಿದೆ. ಮುಂಬರುವ ಜಿಲ್ಲಾ, ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸುವ ಸಂಕಲ್ಪವನ್ನು ಕಾರ್ಯಕರ್ತರು ಮಾಡಬೇಕೆಂದರು.
ದಿಕ್ಸೂಚಿ ಭಾಷಣ ಮಾಡಿದ ಮಾಜಿ ಸಂದಸ ಬಿ.ಎನ್.ಚಂದ್ರಪ್ಪ, ಕಾಂಗ್ರೆಸ್ ಪಕ್ಷ ಕಾರ್ಯಕರ್ತರ ಶ್ರಮದಿಂದಲೇ ಅಧಿಕಾರಕ್ಕೆ ಬಂದ ಪಕ್ಷವಾಗಿದೆ. ಕಾಂಗ್ರೆಸ್ ಪಕ್ಷದ ಜನಪ್ರಿಯತೆಯಿಂದ ಬಿಜೆಪಿ ನಾಯಕರಲ್ಲಿ ಅಸಮದಾನ ಮೂಡಿದೆ. ಅನಗ್ಯವಾಗಿ ಸುಳ್ಳು ಪ್ರಚಾರ ಮಾಡುವ ಮೂಲಕ ಕಾಂಗ್ರೆಸ್ ಪಕ್ಷದ ವರ್ಚಸಿಗೆ ಧಕ್ಕೆ ತರಲು ವಿರೋಧ ಪಕ್ಷಗಳು ನಿರಂತರ ಶ್ರಮಿಸುತ್ತಿದ್ದರೂ ನಾಡಿನ ಮತದಾರರ ಒಲವು ನಮ್ಮ ಪಕ್ಷದ ಮೇಲಿದೆ. ಪಕ್ಷದ ಕಾರ್ಯಕರ್ತರು ಸ್ಥಳೀಯ ಚುನಾವಣೆಗಳಲ್ಲಿ ಪಕ್ಷವನ್ನು ಬಲಪಡಿಸುವಕಾರ್ಯವನ್ನು ಮಾಡಬೇಕು. ಚುನಾವಣೆಯಲ್ಲಿ ಗೆಲುವು ಸಾಧಿಸಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷದ ಗತ ವೈಭವವನ್ನು ಎಲ್ಲರೂ ಕಾಣುವಂತಾಗಬೇಕೆಂದರು.
ಮಾಜಿ ಸಚಿವ ಎಚ್.ಆಂಜನೇಯ ಮಾತನಾಡಿ, ಪ್ರತಿನಿತ್ಯವೂ ಬಿಜೆಪಿ ನಾಯಕರು ಪಕ್ಷದ ವಿರುದ್ದ ವಿನಾಕಾರಣ ಸುಳ್ಳು ಆರೋಪಗಳನ್ನು ಹೋರಿಸುತ್ತಾ ಬಂದಿದ್ಧಾರೆ. ಪಕ್ಷದ ಕಾರ್ಯಕರ್ತರು ದಕ್ಷತೆ, ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿದರೆ ಮಾತ್ರ ಪಕ್ಷದ ಬೆಳವಣಿಗೆ ಸಾಧ್ಯ. ಪಕ್ಷ ಬೆಳೆದರೆ ಕಾರ್ಯಕರ್ತರೂ ಸಹ ಬೆಳೆದಂತೆ. ಮುಂಬರುವ ದಿನಗಳಲ್ಲಿ ಪಕ್ಷದ ಕಾರ್ಯಕರ್ತರಿಗೆ ಸೂಕ್ತಸ್ಥಾನಮಾನಗಳನ್ನು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಶಾಸಕರನ್ನು ಮನವಿ ಮಾಡುವುದಾಗಿ ತಿಳಿಸಿದರು.
ಜಿಲ್ಲಾ ಕೆಪಿಸಿಸಿ ಅಧ್ಯಕ್ಷ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ತಾಜ್ಪೀರ್ ಮಾತನಾಡಿ, ಜನರಿಗೆ ಸೂಕ್ತ ರೀತಿಯಲ್ಲಿ ನ್ಯಾಯ ಒದಗಿಸುವ ಕಾರ್ಯ ಪಕ್ಷ ಮಾಡುತ್ತಾ ಬಂದಿದೆ. ಐದು ಗ್ಯಾರಂಟಿಗಳಿಂದ ನಾಡಿನ ಜನತೆ ಸಂತೃಪ್ತರಾಗಿದ್ಧಾರೆ. ಕಾಂಗ್ರೆಸ್ ಪಕ್ಷದ ಬದ್ದತೆಯ ಬಗ್ಗೆ ಜನರಿಗೆ ಹೆಚ್ಚು ತಿಳಿದಿದೆ. ಕಾರ್ಯಕರ್ತರು ಮುಂಬರುವ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಶ್ರಮಿಸಬೇಕೆಂದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಸಕ, ಸಣ್ಣಕೈಗಾರಿಕೆ ಅಭಿವೃದ್ದಿಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ ಮಾತನಾಡಿ, ಮೂರುಬಾರಿ ಈ ಕ್ಷೇತ್ರದ ಶಾಸಕನಾಗಿ ಆಯ್ಕೆಯಾಗಲು ಪಕ್ಷದ ಕಾರ್ಯಕರ್ತರ ಪರಿಶ್ರಮವೇ ಕಾರಣ. ಮೂರು ಚುನಾವಣೆಯಲ್ಲೂ ನನ್ನ ಗೆಲುವಿಗೆ ಕಾರ್ಯಕರ್ತರು ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿದ್ಧಾರೆ. ಪಕ್ಷದ ಇತಿಮಿತಿಯೊಳಗೆ ಕಾರ್ಯಕರ್ತರಿಗೆ ಸರ್ಕಾರದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತೇನೆ.
ಈಗಾಗಲೇ ಕೆಲವೊಂದು ಸಮಿತಿಗೆ ಕಾರ್ಯಕರ್ತರನ್ನು ನೇಮಿಸಲಾಗಿದೆ. ಕಾರ್ಯಕರ್ತರ ಗೆಲುವು ಪಕ್ಷದ ಗೆಲುವಾಗಬೇಕು. ಕಾರ್ಯಕರ್ತರಿಂದಲೇ ಪಕ್ಷದ ಬೆಳವಣಿಗೆ ಸಾಧ್ಯ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಕಟ್ಟಿಬೆಳೆಸುವಲ್ಲಿ ಕಾರ್ಯಕರ್ತರ ಶ್ರಮಕ್ಕೆ ಬೆಲೆಕಟ್ಟಲು ಸಾಧ್ಯವಿಲ್ಲ. ನಿಮ್ಮೆಲ್ಲರ ಸಂಕಲ್ಪ ಮುಂಬರುವ ಚುನಾವಣೆಯಲ್ಲಿ ಪಕ್ಷವನ್ನು ಹೆಚ್ಚಿನ ಮತಗಳಿಂದ ಗೆಲುವುಕಾಣುವಂತಾಗಬೇಕೆಂದರು.
ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಟಿ.ಪ್ರಭುದೇವ್, ಜಿಲ್ಲಾ ಗ್ಯಾರಂಟಿ ಸಮಿತಿ ಅದ್ಯಕ್ಷ ಶಿವಣ್ಣ, ನಗರಸಭೆ ಅಧ್ಯಕ್ಷೆ ಆರ್.ಮಂಜುಳಾ, ಸದಸ್ಯೆ ಕವಿತಾಬೋರಯ್ಯ, ಎಸ್.ಎಚ್.ಸೈಯದ್ ಮುಂತಾದವರು ಮಾತನಾಡಿದರು.
ಕಾಂಗ್ರೆಸ್ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್, ಕಾರ್ಯದರ್ಶಿ ಮೈಲಾರಪ್ಪ, ಮಹಿಳಾ ಘಟಕದ ಜಿಲ್ಲಾಧ್ಯಕ್ಷ ಗೀತಾನಂದಿನಿಗೌಡ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಬಾಬುರೆಡ್ಡಿ, ಪ್ರಕಾಶ್ಮೂರ್ತಿ, ರವಿಕುಮಾರ್, ಶಶಿಕಲಾ ಸುರೇಶ್ಬಾಬು, ಸಿ.ವೀರಭದ್ರಬಾಬು, ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಗದ್ದಿಗೆ ತಿಪ್ಪೇಸ್ವಾಮಿ, ನಗರಸಭಾ ಉಪಾಧ್ಯಕ್ಷೆ ಸುಮ ಭರಮಣ್ಣ, ಸದಸ್ಯರಾದ ಕೆ.ವೀರಭದ್ರಪ್ಪ, ಜೈತುಂಬಿ, ವಿರೂಪಕ್ಷ, ಎಂ.ಜೆ.ರಾಘವೇಂದ್ರ, ಸುಜಾತ, ನಾಮಿನಿ ಸದಸ್ಯರಾದ ಅನ್ವರ್ಮಾಸ್ಟರ್, ವೀರಭದ್ರಪ್ಪ, ಬಡಗಿ ಪಾಪಣ್ಣ, ನಟರಾಜ ಮುಂತಾದವರು ಉಪಸ್ಥಿತರಿದ್ದರು.