ಹೆಂಡತಿ ಕಳಿಸದಿದ್ದಕ್ಕೆ ಮಾವನ ತೋಟ ಕಡಿದು ಹಾಕಿದ ಅಳಿಯ

News Desk

ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ :
ತನ್ನ ಪತ್ನಿಯನ್ನು ಮನೆಗೆ ವಾಪಸ್‌ ಕಳಿಸಿಲ್ಲ ಎಂಬ ಸಿಟ್ಟಿಗೆ ಮಾವ ಬೆಳೆಸಿದ್ದ ಅಡಿಕೆ ಸಸಿಗಳನ್ನು ಅಳಿಯನೊಬ್ಬ ಕಡಿದು ಹಾಕಿದ ಘಟನೆ ಬಗ್ಗೆ ವರದಿಯಾಗಿದೆ.  

- Advertisement - 

ಹಾನಗಲ್ ತಾಲ್ಲೂಕಿನ ಬಸಾಪುರದಲ್ಲಿ ಮಾವನ ಜಮೀನಿನಲ್ಲಿ ಬೆಳೆದಿದ್ದ 106 ಅಡಿಕೆ ಗಿಡಗಳನ್ನು ಕಡಿದು ನಾಶಪಡಿಸಿದ್ದರ ಸಂಬಂಧ ಆಡೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

- Advertisement - 

ದೂರುದಾರರು ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ವ್ಯಕ್ತಿಯೊಬ್ಬರಿಗೆ ತಮ್ಮ ಮಗಳನ್ನು ಕೊಟ್ಟಿದ್ದರು. ವಿವಿಧ ವಿಚಾರಗಳಿಗೆ ಅಳಿಯನ ವಿರುದ್ಧ ಈ ಕುಟುಂಬ ಸಿಟ್ಟಾಗಿತ್ತು. ಈ ಹಿನ್ನೆಲೆಯಲ್ಲಿ ಮಗಳು ತವರು ಮನೆಗೆ ವಾಪಸ್‌ ಆಗಿದ್ದರು.

ಈ ವಿಷಯದಲ್ಲಿ ಅಳಿಯ ತನ್ನ ಪತ್ನಿಯನ್ನು ವಾಪಸ್‌ ಕಳುಹಿಸುವಂತೆ ಒತ್ತಾಯಿಸಿದ್ದ. ಆದರೆ ಮಾವ ಮದ್ಯವ್ಯಸನ ಬಿಟ್ಟು ಬಿಡುವಂತೆ ಒತ್ತಾಯಿಸಿದ್ದರು. ಈ ನಡುವೆ ಸಿಟ್ಟಿಗೆದ್ದ ಅಳಿಯ ಇದೇ 23 ರ ರಾತ್ರಿ 106 ಅಡಿಕೆ ಸಸಿಗಳನ್ನ ಕಡಿದು ಹಾಕಿದ್ದಾನೆ ಎಂದು ದೂರಲಾಗಿದೆ.

- Advertisement - 

 

Share This Article
error: Content is protected !!
";