ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:
ಮುಂಬರುವ ಅಕ್ಟೋಬರ್ ತಿಂಗಳನಲ್ಲಿ ರಾಜ್ಯಾದ್ಯಂತ 800 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುತ್ತದೆ ಮಹತ್ವದ ಈ ಯೋಜನೆಗೆ ಶಿವಮೊಗ್ಗದಲ್ಲಿಯೇ ಸಿದ್ದರಾಮಯ್ಯನವರು ಚಾಲನೆ ನೀಡಲಿದ್ದಾರೆ ಎಂದು ಶಾಲಾ ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು.
ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ 800 ಕೆಪಿಎಸ್ ಶಾಲೆಗಳನ್ನು ತೆರೆಯಲಾಗುವುದು. ಈ ಪೈಕಿ 500 ಶಾಲೆಗಳನ್ನು ವಿಶ್ವ ಬ್ಯಾಂಕ್ ನೆರವಿನಿಂದ ಪ್ರಾರಂಭಿಸಲಾಗುತ್ತಿದೆ.
ಕೆಕೆಆರ್ಎಲ್ನಿಂದ 200 ಶಾಲೆಗಳು, ಉಳಿದ 100 ಶಾಲೆಗಳನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ಪ್ರಾರಂಭಿಸಲಾಗುವುದು ಎಂದು ಸಚಿವರು ತಿಳಿಸಿದರು.
ಹಿಂದುಳಿದ ಉತ್ತರ ಕರ್ನಾಟಕಕ್ಕೆ800 ಕೆಪಿಎಸ್ ಶಾಲೆ ಆರಂಭ ಮಾಡುವಾಗ ವಿಶೇಷ ಆದ್ಯತೆನೀಡಲಾಗುತ್ತಿದೆ. ಸರ್ಕಾರದ ಜೊತೆಗೆ ಎಸ್ಜಿಓಗಳು ಕೈ ಜೋಡಿಸಲಿವೆ ಎಂದು ಸಚಿವರು ತಿಳಿಸಿದರು.
ಕೆಪಿಎಸ್ ಶಾಲೆಗಳನ್ನು ಮುಂಬರುವ ಅಕ್ಟೋಬರ್ನಲ್ಲಿ ಶಿವಮೊಗ್ಗದಿಂದಲೇಪ್ರಾರಂಭಿಸಲು ಸಿಎಂ ಅವರನ್ನು ಆಹ್ವಾನಿಸಲಾಗುತ್ತದೆ. ಇದರ ಜೊತೆಗೆ ಜಿಲ್ಲೆಯ ಅಭಿವೃದ್ದಿ ಕಾಮಗಾರಿಗೂ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ. ಶರಾವತಿ ಪಂಪ್ಡ್ ಸ್ಟೋರೇಜ್ ವಿಚಾರವನ್ನೂ ಸಿಎಂ ಮಾತನಾಡಲಿದ್ದಾರೆ ಎಂದು ಶಿಕ್ಷಣ ಸಚಿವರು ತಿಳಿಸಿದರು.

