ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪತ್ರಕರ್ತರಿಗೆ ಹೌಸಿಂಗ್ ಹೋರ್ಡ್/ ನಗರಾಭಿವೃದ್ದಿ ಪ್ರಾಧಿಕಾರಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಹಂಚಿಕೆ ಮಾಡುವ ನಿವೇಶನ/ಮನೆಗಳಲ್ಲಿ ಶೇ.5ರಷ್ಟು ಮೀಸಲಿಡಬೇಕೆಂದು ಸರ್ಕಾರವನ್ನು ಒತ್ತಾಯಿಸಿದ ಮನವಿ ಪತ್ರವನ್ನು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರಾದ ಕೆ.ವಿ.ಪ್ರಭಾಕರ್ ಮತ್ತು ವಸತಿ ಸಚಿವ ವಿಶೇಷಾಧಿಕಾರಿ ಎಸ್.ಲಕ್ಷ್ಮಿನಾರಾಯಣ್ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸಲ್ಲಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಸೋಮಶೇಖರ್ ಕೆರಗೋಡು, ರಾಮನಗರದ ಚೆಲುವರಾಜು ಇದ್ದರು.

