ಅವಿರೋಧವಾಗಿ ಆಯ್ಕೆಗೊಂಡ ಶಿವಾನಂದ ತಗಡೂರು ನೇತೃತ್ವದ ತಂಡ

News Desk

 ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ(ಕೆಯುಡಬ್ಲೂಜೆ)
2025-2028ನೇ ಸಾಲಿನ ಚುನಾವಣೆಯಲ್ಲಿ ರಾಜ್ಯಾಧ್ಯಕ್ಷರಾಗಿ ಶಿವಾನಂದ ತಗಡೂರು ಅವರ ನೇತೃತ್ವದ ರಾಜ್ಯ ಪದಾಧಿಕಾರಿಗಳ ತಂಡ ಅವಿರೋಧವಾಗಿ ಆಯ್ಕೆಯಾಗಿದೆ.

ಮುಖ್ಯ ಚುನಾವಣಾಧಿಕಾರಿ ಎನ್.ರವಿಕುಮಾರ್ (ಟೆಲೆಕ್ಸ್) ಅವರು ಈ ಬಗ್ಗೆ ಅಧಿಕೃತವಾಗಿ ಪ್ರಕಟಣೆ ನೀಡಿದ್ದು, ಒಂಬತ್ತು ಸ್ಥಾನಗಳಿಗೂ ಅವಿರೋಧ ಆಯ್ಕೆಯಾಗಿದೆ ಎಂದು ಅವರು ಘೋಷಿಸಿದ್ದಾರೆ.

- Advertisement - 

ಅಧ್ಯಕ್ಷರು: ಶಿವಾನಂದ ತಗಡೂರು. ಉಪಾಧ್ಯಕ್ಷರು: ಹೆಚ್.ಬಿ.ಮದನ ಗೌಡ, ಅಜ್ಜಮಾಡ ರಮೇಶ್ ಕುಟ್ಟಪ್ಪ, ಮತ್ತಿಕೆರೆ ಜಯರಾಮ. ಪ್ರಧಾನ ಕಾರ್ಯದರ್ಶಿಜಿ.ಸಿ.ಲೋಕೇಶ.

ಕಾರ್ಯದರ್ಶಿಗಳು: ನಿಂಗಪ್ಪ ಚಾವಡಿ, ಪುಂಡಲೀಕ ಬಾಲೋಜಿ, ಸೋಮಶೇಖರ ಕೆರೆಗೋಡು. ಖಜಾಂಚಿ; ವಾಸುದೇವ ಹೊಳ್ಳ.

- Advertisement - 

Share This Article
error: Content is protected !!
";