ವಿಮಾನಯಾನದ ಕನಸು ಸಾಕಾರಗೊಳಿಸಿದ ಉಡಾನ್ ಯೋಜನೆ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಾಮಾನ್ಯ ಜನರಿಗೂ ವಿಮಾನಯಾನದ ಕನಸನ್ನು ಸಾಕಾರಗೊಳಿಸಿದ ಉಡಾನ್ ಯೋಜನೆಯನ್ನು ಇನ್ನೂ
3 ರಿಂದ 5 ವರ್ಷಗಳವರೆಗೆ ವಿಸ್ತರಿಸುವುದು ಇಂದಿನ ಅಗತ್ಯವಾಗಿದೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.

ಈ ಯೋಜನೆ ವಿಸ್ತರಣೆಯಾದಲ್ಲಿ, ಸಾಮಾನ್ಯ ಜನರಿಗೆ ಕೈಗೆಟುಕುವ ದರದಲ್ಲಿ ಪ್ರಯಾಣಿಸಲು ಸಾಧ್ಯವಾಗುವುದಲ್ಲದೆ, ಪ್ರಾದೇಶಿಕ ಸಂಪರ್ಕ ಬಲಗೊಂಡು ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ ಸಿಗಲಿದೆ.ಈ ನಿಟ್ಟಿನಲ್ಲಿ, ಯೋಜನೆಯನ್ನು ಮುಂದುವರಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಅವರು ಹೇಳಿದರು.

- Advertisement - 

ಇದರೊಂದಿಗೆ, ಕರ್ನಾಟಕದ ಸಣ್ಣ ವಿಮಾನ ನಿಲ್ದಾಣಗಳ ಅಭಿವೃದ್ಧಿ ಮತ್ತು ದೀರ್ಘಕಾಲೀನ ಸ್ಥಿರತೆಯನ್ನು ಗಮನದಲ್ಲಿಟ್ಟುಕೊಂಡು, ರಾಜ್ಯದ್ದೇ ಆದ ಸ್ವತಂತ್ರ ನಾಗರಿಕ ವಿಮಾನಯಾನ ನೀತಿರೂಪಿಸಲು ನಮ್ಮ ಸರ್ಕಾರ ಕಾರ್ಯಪ್ರವೃತ್ತವಾಗಿದೆ ಎಂದು ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.

 

- Advertisement - 

 

Share This Article
error: Content is protected !!
";