ದೇವರ ಬೆಳ್ಳಿ ಕೀರಿಟ ಕದ್ದ ಕಳ್ಳ, ಸಿಸಿಟಿವಿಯಲ್ಲಿ ಸೆರೆಯಾದ ಕಳ್ಳತನ ಕೃತ್ಯ

News Desk

ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ದೇವರ ಬೆಳ್ಳಿಯ ಕಿರೀಟ ಕಳವು ಮಾಡಿರುವ ಘಟನೆ ಕಳೆದ ತಿಂಗಳ ಏ.
25ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ನಗರದ ಜೈನ್ ಲೇಔಟ್​ನಲ್ಲಿರುವ ಬನ್ನಿ ಮಹಾಕಾಳಿ ದೇವಸ್ಥಾನದಲ್ಲಿ ಕಳ್ಳತನ ನಡೆದಿದೆ. 53 ಸಾವಿರ ರೂಪಾಯಿ ಬೆಳೆಬಾಳುವ 606 ಗ್ರಾಂ ತೂಕದ ಬೆಳ್ಳಿ ಕಿರೀಟವನ್ನು ಕಳ್ಳ ಕದಿಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ದಾವಣಗೆರೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು  ಸಿಸಿಟಿವಿಯಲ್ಲಿ ಸೆರೆಯಾಗಿರುವ ದೃಶ್ಯ ಆಧರಿಸಿ ಕಳ್ಳನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ದೇವಾಲಯದ ಬಾಗಿಲು ತೆರೆದಿದ್ದರಿಂದ ಯಾರೂ ಇಲ್ಲದ ವೇಳೆ ಕಳ್ಳ ಕೃತ್ಯ ಎಸಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ದೇವಾಲಯದ ಸಮಿತಿಯವರು ಸಿಸಿಟಿವಿ ಪರಿಶೀಲನೆ ನಡೆಸಿದಾಗ ಕಳ್ಳತನ ಬೆಳಕಿಗೆ ಬಂದಿದೆ.
ದೇವರ ಕಿರೀಟ ಕದ್ದ ಆರೋಪಿಯನ್ನು ಬಂಧಿಸಿ
, ಕಿರೀಟ ಮರಳಿ ನೀಡುವಂತೆ ಸಮಿತಿಯವರು ಪೊಲೀಸರಿಗೆ ಮನವಿ ಮಾಡಿದ್ದಾರೆ.

 

Share This Article
error: Content is protected !!
";