ಇಂದು ಅದ್ಧೂರಿ ಜಂಬೂ ಸವಾರಿ

News Desk

ಚಂದ್ರವಳ್ಳಿ ನ್ಯೂಸ್, ಮೈಸೂರು:
ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸುವ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ.

ರಾಜ್ಯ, ಹೊರ ರಾಜ್ಯ ಹಾಗೂ ದೇಶ ವಿದೇಶಗಳಿಂದಲೂ ಜನರು ಜಂಬೂಸವಾರಿ ವೀಕ್ಷಣೆಗಾಗಿ ಆಗಮಿಸುತ್ತಿದ್ದಾರೆ.
ಅಕ್ಟೋಬರ್-2ರ ಗುರುವಾರ ದಸರಾ ಗಜಪಡೆಯ ನಾಯಕ ಅಭಿಮನ್ಯು 750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿನ ನಾಡಿನ ಅಧಿದೇವತೆ ಚಾಮುಂಡೇಶ್ವರಿ ದೇವಿಯನ್ನು ಹೊತ್ತು ಸಾಗುವ ಅಪರೂಪದ ಕ್ಷಣವನ್ನು ಕಣ್ತುಂಬಿಕೊಳ್ಳಲು ಕೋಟ್ಯಂತರ ಭಕ್ತರು, ಸಾರ್ವಜನಿಕರು ಕಾತರದಿಂದ ಕಾಯುತ್ತಿದ್ದಾರೆ.

- Advertisement - 

ಈ ಬಾರಿಯ ನಾಡಹಬ್ಬ ದಸರಾವು 11 ದಿನಗಳ ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಮುಕ್ತಾಯದ ಹಂತಕ್ಕೆ ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಗಣ್ಯರು ಪುಷ್ಪಾರ್ಚನೆ ಮಾಡುವ ಮೂಲಕ ಜಗತ್​ಪ್ರಸಿದ್ದ ಜಂಬೂ ಸವಾರಿಗೆ ಗುರುವಾರ ಚಾಲನೆ ನೀಡಲಿದ್ದಾರೆ.

ಬಳಿಕ ಅಭಿಮನ್ಯು ಆನೆಯು ಅರಮನೆ ಬಳಿಯಿಂದ ಚಿನ್ನದ ಅಂಬಾರಿ ಹೊತ್ತು ಕೆ.ಆರ್.ವೃತ್ತ, ಸಯ್ಯಾಜಿರಾವ್ ರಸ್ತೆ, ಆಯುರ್ವೇದಿಕ್ ವೃತ್ತ, ಬಂಬೂ ಬಜಾರ್ ಮೂಲಕ ಬನ್ನಿಮಂಟಪದವರೆಗೆ ಸುಮಾರು 5 ಕಿ.ಮೀ. ದೂರ ಸಾಗಲಿದೆ. ಜಂಬೂ ಸವಾರಿಯಲ್ಲಿ ಆಕರ್ಷಕ ಸ್ತಬ್ಧ ಚಿತ್ರಗಳು ಹಾಗೂ ಕಲಾತಂಡಗಳು ಸಾಥ್​ ನೀಡುವ ಮೂಲಕ ಮೆರವಣಿಗೆಗೆ ಮತ್ತಷ್ಟು ಮೆರುಗು ಸಿಗಲಿದೆ.

- Advertisement - 

 

Share This Article
error: Content is protected !!
";