ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಬರುಜನಹಟ್ಟಿ ರಸ್ತೆಯಲ್ಲಿರುವ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಶುಕ್ರವಾರ ರಾಮನವಮಿ ಪೂಜೆ ವಿಜೃಂಭಣೆಯಿಂದ ನೆರವೇರಲಿದೆ.
ಬೆಳಿಗ್ಗೆ ೯ ಕ್ಕೆ ಗಣಹೋಮ, ಶ್ರೀರಾಮತಾರಕ ಹೋಮ, ನವಗ್ರಹ ಹೋಮ, ಮಧ್ಯಾಹ್ನ ೧೨-೩೦ ರಿಂದ ಪೂರ್ಣಾಹುತಿ, ಮಹಾ ಮಂಗಳಾರತಿ ಪ್ರಸಾದ ವಿನಿಯೋಗವಿರುತ್ತದೆ.
ಮಾ.೨೮ ರಂದು ಬೆಳಿಗ್ಗೆ ೮-೩೦ ಕ್ಕೆ ಮಹಿಳೆಯರಿಂದ ಗಂಗೆ ಹೊತ್ತು ತರುವ ಮೆರವಣಿಗೆ, ಸ್ವಾಮಿಗೆ ಅಲಂಕಾರ. ಮಹಾಮಂಗಳಾರತಿ ನಂತರ ಅನ್ನಸಂತರ್ಪಣೆ.
ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸ್ವಾಮಿಯ ಕೃಪೆಗೆ ಪಾತ್ರರಾಗುವಂತೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ವ್ಯವಸ್ಥಾಪಕರು ವಿನಂತಿಸಿದ್ದಾರೆ.

