ರಾಜ್ಯ ರಸ್ತೆ ಸಾರಿಗೆ ನಿಗಮ ವತಿಯಿಂದ ಟೂರ್ ಪ್ಯಾಕೇಜ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರುಶಿವಗಂಗೆ ಸಿದ್ಧಗಂಗಾಮಠ ದೇವರಾಯನದುರ್ಗಗೊರವನಹಳ್ಳಿ ವಿದುರಾಶ್ವಥ ಘಾಟಿ ಸುಬ್ರಹ್ಮಣ್ಯ ಮಾರ್ಗದಲ್ಲಿ ಅಶ್ವಮೇಧ ಕ್ಲಾಸಿಕ್ ಸಾರಿಗೆಯನ್ನು ವಾರಾಂತ್ಯದ ಶನಿವಾರ ಮತ್ತು ಭಾನುವಾರ ದಿನಗಳಲ್ಲಿ ಪ್ಯಾಕೇಜ್ ಪ್ರವಾಸ ಪ್ರಾರಂಭಿಸಲಾಗಿದೆ. ಈ ಪ್ರವಾಸ ಬೆಳಿಗ್ಗೆ 6.30ಕ್ಕೆ ಪ್ರಾರಂಭಗೊಂಡು ರಾತ್ರಿ 8 ಗಂಟೆಗೆ ಮುಕ್ತಾಯಗೊಳ್ಳಲಿದೆ.

ಈ ಪ್ರವಾಸ ಇದೇ ಜುಲೈ 26 ರಿಂದ ಪ್ರಾರಂಭಗೊಳ್ಳುತ್ತದೆ. ಪ್ರವೇಶ ಶುಲ್ಕ, ಉಪಹಾರ, ಮಧ್ಯಾಹ್ನ/ ರಾತ್ರಿ ಊಟವನ್ನು ಹೊರತುಪಡಿಸಿ, ಅಶ್ವಮೇಧ ಕ್ಲಾಸಿಕ್ ಸಾರಿಗೆ ಪ್ರಯಾಣ ಮುಂಗಡ ಬುಕಿಂಗ್ ಸೇರಿ ವಯಸ್ಕರರಿಗೆ ರೂ. 650  ಹಾಗೂ 6 ರಿಂದ 12 ವರ್ಷದೊಳಗಿನ ಮಕ್ಕಳಿಗೆ ರೂ. 500 ದರ ನಿಗದಿಪಡಿಸಿದೆ

- Advertisement - 

ಸಾರ್ವಜನಿಕ ಪ್ರಯಾಣಿಕರು ಮೇಲೆ ತಿಳಿಸಿರುವ ಪ್ಯಾಕೇಜ್ ಪ್ರವಾಸ ಸಾರಿಗೆ ಸೌಲಭ್ಯಕ್ಕಾಗಿ ಟಿಕೆಟ್ ಪಡೆಯಲು ವೆಬ್‍ಸೈಟ್ www.ksrtc.in  & www.ksrtc.karnataka.gov.in  ಹಾಗೂ  ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-26252625 / 7760990100 / 7760990560 / 7760990287 ಅನ್ನು ಸಂಪರ್ಕಿಸಬಹುದು ಎಂದು  ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

- Advertisement - 

 

 

 

Share This Article
error: Content is protected !!
";