ಬಳ್ಳಾರಿ, ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳ ಪ್ರವಾಸಿಗರು ಸುರಕ್ಷಿತ-ಡಾ. ಪ್ರಭಾ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಕಾರಣದಿಂದ ಕರ್ನಾಟಕದ ಎಂಟು ಮಂದಿ ಭಾರತೀಯ ಪ್ರವಾಸಿಗರು ಹಳೆಯ ದೋಹಾ ಬಂದರಿನಲ್ಲಿ ಹಾಗೂ ಬಹರೈನ್ ರಾಜ್ಯದ ಉಮ್ ಅಲ್ ಹಸ್ಸಾಮ್ ಪ್ರದೇಶದಲ್ಲಿ ನಾಲ್ವರು ಭಾರತೀಯರು ಸಿಲುಕಿಕೊಂಡಿದ್ದಾರೆ.

ಈ ಹಿನ್ನೆಲೆಯಲ್ಲಿ ಭಾರತ ಸರ್ಕಾರದ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಹಾಗೂ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್  ಮನವಿ ಮಾಡಿದ್ದಾರೆ. 

- Advertisement - 

ಅವರೆಲ್ಲರೂ ಸುರಕ್ಷಿತವಾಗಿ ಆಗಮಿಸಲು ಭಾರತ ಸರ್ಕಾರದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ತಕ್ಷಣ ಮಧ್ಯಪ್ರವೇಶ ಮಾಡಿ ಅಗತ್ಯ ಕ್ರಮ ಕೈಗೊಳ್ಳುವಂತೆ ಕೇಂದ್ರ ವಿದೇಶಾಂಗ ಸಚಿವರಾದ ಡಾ. ಸುಬ್ರಹ್ಮಣ್ಯಂ ಜೈಶಂಕರ್ ಅವರಿಗೆ ಮನವಿ ಮಾಡಿದ್ದಾರೆ.

ಸಂಬಂಧಿತ ರಾಯಭಾರಿ ಕಚೇರಿ ಅಧಿಕಾರಿಗಳಿಗೆ ಸೂಚನೆ ನೀಡಿ, ಪ್ರವಾಸಿಗರನ್ನು ಶೀಘ್ರದಲ್ಲಿ ಸುರಕ್ಷಿತವಾಗಿ ಭಾರತಕ್ಕೆ ಕರೆತರಲು ಕ್ರಮ ಕೈಗೊಳ್ಳುವಂತೆ ವಿನಂತಿಸಲಾಗಿದೆ.

- Advertisement - 

ಈಗಾಗಲೇ ದುಬೈಗೆ ತೆರಳಿದ್ದ ಸುಮಾರು 50 ಪ್ರಯಾಣಿಕರು ಸುರಕ್ಷಿತವಾಗಿ ಹಿಂದಿರುಗಿದ್ದಾರೆ. ಬಳ್ಳಾರಿ, ಚಿತ್ರದುರ್ಗ ಹಾಗೂ ನಮ್ಮ ದಾವಣಗೆರೆ ಕ್ಷೇತ್ರದ ಜಗಳೂರು ತಾಲ್ಲೂಕಿನ 15 ಜನರು ಸುರಕ್ಷಿತವಾಗಿ ಬಂದಿದ್ದಾರೆ. ಅದಕ್ಕೂ ಮುನ್ನ ಆಫ್ರಿಕಾ ಖಂಡದ ಚಾಡ್ ದೇಶದಲ್ಲಿ ವೀಸಾ ಸಮಸ್ಯೆಯಿಂದ ತೊಂದರೆಯಲ್ಲಿದ್ದ ಎಂಟು ಮಂದಿ ಹಕ್ಕಿಪಿಕ್ಕಿ ಜನಾಂಗದವರನ್ನು ಸುರಕ್ಷಿತವಾಗಿ ಕರೆತರುವಲ್ಲಿ ಕೇಂದ್ರ ವಿದೇಶಾಂಗ ಸಚಿವರಾದ ಡಾ.ಎಸ್ ಜೈಶಂಕರ್ ಅವರು ಹಾಗೂ ರಾಯಭಾರಿ ಕಚೇರಿ ನೀಡಿದ ಸಹಕಾರಕ್ಕೆ ಧನ್ಯವಾದಗಳನ್ನು ಅವರು ಅರ್ಪಿಸಿದ್ದಾರೆ.

ಇದೀಗ ಪ್ರವಾಸಕ್ಕೆ ತೆರಳಿರುವ ಕರ್ನಾಟಕದ ಎಲ್ಲಾ ನಾಗರೀಕರು ಸುರಕ್ಷಿತವಾಗಿ ಹಿಂದಿರುಗಲು ಅಗತ್ಯವಾದ ಎಲ್ಲಾ ಬೆಂಬಲ ನೀಡಲಾಗುತ್ತಿದೆ. ಆದ್ದರಿಂದ  ಕುಟುಂಬದ ಸದಸ್ಯರು ಆತಂಕಕ್ಕೆ ಒಳಗಾಗುವರು ಬೇಡ. ನಿಮ್ಮೊಂದಿಗೆ ನಾವಿದ್ದೇವೆ ಎಂದು ಸಂಸದೆ ಪ್ರಭಾ ಭರವಸೆ ನೀಡಿದ್ದಾರೆ.

Share This Article
error: Content is protected !!
";