ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಬಿಡದಿ ಟೌನ್ ಶಿಫ್ ನಿರ್ಮಾಣವಾಗಲಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ಅವರ ಭೂಮಿಗೆ ದರ ಕೊಡುತ್ತೇವೆ. ಈಗಾಗಲೇ ರೈತರೊಂದಿಗೆ ಮಾತನಾಡಿದ್ದೇವೆ.
ಬೆಂಗಳೂರು ನಗರಕ್ಕಿಂತಲೂ ಹೆಚ್ಚಿನ ಹಣ ಸಿಗುವಂತೆ ಮಾಡುವೆ. ಈ ಬಗ್ಗೆ ಯಾರಿಗೂ ಆತಂಕ ಅಥವಾ ಅನುಮಾನ ಬೇಡ ಎಂದು ಡಿ.ಕೆ ಶಿವಕುಮಾರ್ ಭರವಸೆ ನೀಡಿದ್ದಾರೆ.