ಜನರಿಗೆ ಶಕ್ತಿ ತುಂಬಲು ಕಂದಾಯ ಗ್ರಾಮಗಳಾಗಿ ಪರಿವರ್ತನೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪ್ರಗತಿಯತ್ತ ಕರ್ನಾಟಕ – ಸಮರ್ಪಣೆ ಸಂಕಲ್ಪ! ರಾಜ್ಯ ಕಾಂಗ್ರೆಸ್ ಸರ್ಕಾರವು ಯಶಸ್ವಿ 2 ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಆಯೋಜಿಸುತ್ತಿರುವ ಸಾಧನಾ ಸಮಾವೇಶದ ಸ್ಥಳ ಪರಿಶೀಲಿಸಿ, ಸುದ್ಧಿಗೋಷ್ಟಿ ನಡೆಸಿ, ಡಿಸಿಎಂ ಡಿ.ಕೆ ಶಿವಕುಮಾರ್ ಮಾತನಾಡಿದರು.

ರಾಜ್ಯದ ಮಹಾಜನತೆ 2023ರ ಮೇ 13ರಂದು ಕಾಂಗ್ರೆಸ್‌ಸರ್ಕಾರದ ಮೇಲೆ ಅಪಾರವಾದ ನಂಬಿಕೆ, ವಿಶ್ವಾಸವನ್ನಿಟ್ಟು 136 ಸ್ಥಾನಗಳನ್ನು ನೀಡಿ ಪಕ್ಷವನ್ನು ಅಧಿಕಾರಕ್ಕೆ ತಂದು, ರಾಜ್ಯಕ್ಕೆ ದೊಡ್ಡ ಸಂದೇಶವನ್ನು ಕೊಟ್ಟಿದ್ದಾರೆ. ನಮ್ಮ ಸರ್ಕಾರಕ್ಕೆ ಇದೀಗ ಎರಡು ವರ್ಷದ ಸಂಭ್ರಮ. ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ.

ಎರಡು ವರ್ಷದ ಸಂಭ್ರಮದ ಜೊತೆಗೆ ಜನರಿಗೆ ಶಕ್ತಿಯನ್ನು ತುಂಬಲು ಕಂದಾಯ ಗ್ರಾಮಗಳಾಗಿ ಪರಿವರ್ತನೆಗೊಂಡಿರುವ ಹಾಡಿ, ಹಟ್ಟಿ, ತಾಂಡಾಗಳಲ್ಲಿನ ನಿವಾಸಿಗಳಿಗೆ 94 ಡಿಅಡಿ ಮೇ 20ರಂದು ಒಂದು ಲಕ್ಷ ಹಕ್ಕು ಪತ್ರಗಳನ್ನು ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಹಿಂದೆಯೇ ನಾವು ಹಕ್ಕುಪತ್ರಗಳನ್ನು (ಪಟ್ಟಾಗಳನ್ನು) ನೀಡುವುದಾಗಿ ಘೋಷಿಸಿದ್ದೆವು. 1 ಲಕ್ಷ ಪಟ್ಟಾಗಳನ್ನು ನೀಡಲು ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ತಿಳಿಸಿದರು.

 

 

 

Share This Article
error: Content is protected !!
";