ಪಾಕಿಸ್ತಾನದ ಪರ ಘೋಷಣೆ ಕೂಗುವುದು ದೇಶದ್ರೋಹ: ಸಿದ್ದರಾಮಯ್ಯ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪಾಕಿಸ್ತಾನದ ಪರವಾಗಿ ಯಾರೇ ಘೋಷಣೆ ಕೂಗುವುದು, ಆ ದೇಶದ ಪರವಾಗಿ ಮಾತನಾಡಿದರೂ ಅದು ದೇಶದ್ರೋಹ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನ ಸೌಧದ  ಪೂರ್ವಭಾಗದಲ್ಲಿರುವ    ಸಾಂಸ್ಕೃತಿಕ ನಾಯಕ  ಬಸವಣ್ಣನವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿರುವ ಪ್ರಕರಣದಲ್ಲಿ ಹದಿನೈದು ಜನರ ಮೇಲೆ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ ಎಂದು ಹೇಳಿದರು.
ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು. ಯಾರೇ ಪಾಕಿಸ್ತಾನದ ಪರವಾಗಿ ಮಾತನಾಡಿದರೆ ಅದು ತಪ್ಪು ಎಂದರು.

 

 

- Advertisement - 
Share This Article
error: Content is protected !!
";