ಕಾರೊಂದು ಕೆರೆಗೆ ಉರುಳಿ ಇಬ್ಬರ ಸಾವು

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:
ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಪರಿಣಾಮ ಇಬ್ಬರು ಸಾವನ್ನಪ್ಪಿ, ಮತ್ತಿಬ್ಬರು ಗಾಯಗೊಂಡಿರುವ ಘಟನೆ ಸೊರಬ ತಾಲೂಕು ಆನವಟ್ಟಿ ಸಮೀಪದ ಕನ್ನೆಕೊಪ್ಪ ಹೊಸೂರು ಬಳಿ ಬುಧವಾರ ಮುಂಜಾನೆ ನಡೆದಿದೆ.‌
ಕಾರು ಕೆರೆಗೆ ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು
, ಇನ್ನಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

 ಶಿಕಾರಿಪುರ ತಾಲೂಕಿನ ಪುನೇದಹಳ್ಳಿ ಗ್ರಾಮ ನಿವಾಸಿ ನವೀನ್(21) ಹಾಗೂ ರಾಮಚಂದ್ರ(37) ಮೃತ ದುರ್ದೈವಿಗಳು. ರುದ್ರೇಶ್(26) ಹಾಗೂ ಮಂಜುನಾಥ್(21) ಇಬ್ಬರು ಗಾಯಗೊಂಡಿದ್ದರೂ ಪ್ರಾಣಾಪಾಯದಿಂದ ಪರಾಗಿದ್ದಾರೆ. ರಾಮಚಂದ್ರ ಕಾರನ್ನು ಚಲಾಯಿಸುತ್ತಿದ್ದರು ಎನ್ನಲಾಗಿದೆ.

- Advertisement - 

ಶಿಕಾರಿಪುರದ ಪುನೇದಹಳ್ಳಿಯಿಂದ ಬುಧವಾರ ಬೆಳಗಿನಜಾವ ಆನವಟ್ಟಿ ಕಡೆ ಮಾರುತಿ ಸುಜುಕಿ ಇಕೊ ಕಾರಿನಲ್ಲಿ ನಾಲ್ಕು ಜನ ಪ್ರಯಾಣಿಸುತ್ತಿದ್ದರು‌. ಈ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಗೆ ಉರುಳಿದೆ. ಸ್ಥಳಕ್ಕೆ ಆನವಟ್ಟಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

- Advertisement - 
Share This Article
error: Content is protected !!
";