ದೈಹಿಕ ಶಿಕ್ಷಕರ ಸಂಘಕ್ಕೆ ಪದಾಧಿಕಾರಿಗಳ ಅವಿರೋಧ ಆಯ್ಕೆ

News Desk

ಚಂದ್ರವಳ್ಳಿ ನ್ಯೂಸ್, ಕೂಡ್ಲಿಗಿ:
ಕೂಡ್ಲಿಗಿ ಪಟ್ಟಣದಲ್ಲಿ ನಡೆದ 2024 ರಿಂದ 2029ರ ಅವಧಿಯ ಚುನಾವಣೆಯಲ್ಲಿ ಗ್ರೇಡ್ -1 ದೈಹಿಕ ಶಿಕ್ಷಣ ಶಿಕ್ಷಕರ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದ ಅಧ್ಯಕ್ಷ  ಬಿ ಎಂ ಭರತೇಶ್ ಕುಮಾರ್ ಹಾಗೂ ಪ್ರಧಾನ ಕಾರ್ಯದರ್ಶಿ ನಾಗಭೂಷಣ
, ಸಂಘಟನಾ ಕಾರ್ಯದರ್ಶಿ ಬಸವೇಶಿ ಖಜಾಂಚಿ  ಕಲೀಲ್ ಸಾಬ್ ಉಪಾಧ್ಯಕ್ಷರಾಗಿ ಎನ್ ಕರಿಬಸಪ್ಪ, ಮಹೇಂದ್ರ, ಜ್ಯೋತಿ, ಸಂಘದ ಎಲ್ಲಾ ಪದಾಧಿಕಾರಿಗಳು ಅವಿರೋಧ ಆಯ್ಕೆಯಾಗಿದ್ದಾರೆ.
ಗ್ರೇಡ್ 2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ವತಿಯಿಂದ ಅದ್ದೂರಿಯಾಗಿ ಸನ್ಮಾನ ಕಾರ್ಯಕ್ರಮ ನೆರವೇರಿಸಲಾಯಿತು.

ಕಾರ್ಯಕ್ರಮದಲ್ಲಿ ಗ್ರೇಡ್ -2 ಸಂಘದ ಅಧ್ಯಕ್ಷ ಚೆನ್ನಬಸಪ್ಪ, ಜಿಲ್ಲಾ  ವಿಜಯನಗರದ ದೈಹಿಕ ಶಿಕ್ಷಕರ ಸಂಘದ ಉಪಾಧ್ಯಕ್ಷ ಎ ರಮೇಶ್, ತಾಲೂಕು ಘಟಕದ ಉಪಾಧ್ಯಕ್ಷ ಕೋಗಳಿ ಕೊಟ್ರೇಶ್, ಕರಿಬಸಪ್ಪ, ವೀರಣ್ಣ , ಕರಿ ಬಸವನ ಗೌಡ ಖಜಾಂಚಿ ಹಾಗೂ ಇನ್ನು ಹಲವಾರು ಪದಾಧಿಕಾರಿಗಳು ಮತ್ತು ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಶಶಿಧರ್, ತಾಲೂಕು ಪರಿವೀಕ್ಷಕರು ಭಾಗವಹಿಸಿದ್ದರು ಎಂದು ಸಿ.ಅರುಣ್ ಕುಮಾರ್ ತಿಳಿಸಿದ್ದಾರೆ.

 

- Advertisement -  - Advertisement - 
Share This Article
error: Content is protected !!
";