ಕೇಂದ್ರ ರೈಲ್ವೆ ಸಚಿವ ವಿ. ಸೋಮಣ್ಣ ಅವರ ಪರಿಷ್ಕೃತ ಜಿಲ್ಲಾ ಪ್ರವಾಸ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಮೇ. 17 ರಂದು ಕೈಗೊಂಡಿದ್ದ ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಪರಿಷ್ಕøತಗೊಂಡಿದೆ.

      ಪರಿಷ್ಕø ಪ್ರವಾಸ ಪಟ್ಟಿಯನ್ವಯ ಸಚಿವ ವಿ. ಸೋಮಣ್ಣ ಅವರು ಅಂದು ಬೆಳಿಗ್ಗೆ ತುಮಕೂರು ಜಿಲ್ಲೆಯ ತಿಮ್ಮರಾಜನಹಳ್ಳಿಯಿಂದ ಹೊರಟು, ಮಧ್ಯಾಹ್ನ 12 ಗಂಟೆಗೆ ಚಿತ್ರದುರ್ಗ ನಗರಕ್ಕೆ ಆಗಮಿಸುವರು.  

ಬಳಿಕ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ತುಮಕೂರುಚಿತ್ರದುರ್ಗದಾವಣಗೆರೆ ನೂತನ ರೈಲ್ವೆ ಮಾರ್ಗದ ಕಾಮಗಾರಿಯ ಪ್ರಗತಿ ಕುರಿತಂತೆ ಪರಿಶೀಲನಾ ಸಭೆ ನಡೆಸುವರು.  

ಮಧ್ಯಾಹ್ನ 02 ಗಂಟೆಗೆ ಚಿತ್ರದುರ್ಗ ನಗರದಲ್ಲಿನ ಮೆದೆಹಳ್ಳಿ ರಸ್ತೆ ರೈಲ್ವೆ ಕೆಳಸೇತುವೆ, ರೈಲ್ವೆ ಲೆವೆಲ್ ಕ್ರಾಸಿಂಗ್ ಸಂಖ್ಯೆ 22 ಹಾಗೂ ಚಿತ್ರದುರ್ಗದ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವರು.  

ಸಚಿವರು ಅದೇ ದಿನ ಮಧ್ಯಾಹ್ನ 03 ಗಂಟೆಗೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ರೈಲ್ವೆ ಖಾತೆ ರಾಜ್ಯ ಸಚಿವರ ಕಾರ್ಯಾಲಯದ ಸೆಕ್ಷನ್ ಅಧಿಕಾರಿಗಳು ತಿಳಿಸಿದ್ದಾರೆ.

 

Share This Article
error: Content is protected !!
";