ಗಿನ್ನಿಸ್ ದಾಖಲೆ ಬರೆದ ಜಲವೇ ಜೀವ ಪ್ರತಿಜ್ಞೆ ಸ್ವೀಕಾರ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ವತಿಯಿಂದ ಮಾರ್ಚ್ 21 ರಿಂದ 28 ರವರೆಗೆ ನಡೆದ ಜಲ ಸಂರಕ್ಷಣಾ ಅಭಿಯಾನ ಜಲವೇ ಜೀವಸಪ್ತಾಹದಲ್ಲಿ 5,33,642 ಜನರು ಪ್ರತಿಜ್ಞೆ ಸ್ವೀಕರಿಸಿ,

- Advertisement - 

ಜಲ ಸಂರಕ್ಷಣೆಯಲ್ಲಿ ಗಿನ್ನಿಸ್ ವಿಶ್ವದಾಖಲೆ ಬರೆದ ಹಿನ್ನೆಲೆಯಲ್ಲಿ ಅಧಿಕೃತ ಪ್ರಮಾಣ ಪತ್ರ ಸ್ವೀಕರಿಸಲಾಯಿತು ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು.

- Advertisement - 

ಇದೊಂದು ಐತಿಹಾಸಿಕ ಸಾಧನೆ ಆಗಿದ್ದು, ಇದಕ್ಕಾಗಿ ಶ್ರಮಿಸಿದ ಹಾಗೂ ಪ್ರತಿಜ್ಞೆ ಸ್ವೀಕರಿಸಿದ ಸರ್ವರಿಗೂ ಅಭಿನಂದನೆಗಳನ್ನು ಡಿಸಿಎಂ ಅವರು ಸಲ್ಲಿಸಿದ್ದಾರೆ.

 

- Advertisement - 

 

Share This Article
error: Content is protected !!
";